Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುಸ್ತಕ ಪ್ರಿಯರಿಗೆ ಸುವರ್ಣ ಅವಕಾಶ : ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ

Facebook
Twitter
Telegram
WhatsApp

 

ಚಿತ್ರದುರ್ಗ, (ನವೆಂಬರ್.03) : ಕನ್ನಡ ರಾಜ್ಯೋತ್ಸವ ಅಂಗವಾಗಿ 2022ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.

ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೇ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್‍ನಲ್ಲಿ ಕೂಡ ಶೇ.50ರಷ್ಟು ರಿಯಾಯಿತಿ ಲಭ್ಯವಿದೆ.

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇ.50ರ ರಿಯಾಯಿತಿಯಲ್ಲಿ ಲಭ್ಯವಿದೆ. ಪ್ರಾಧಿಕಾರದ ವೆಬ್‍ಸೈಟ್
www.kannadapustakapradhikara.com ದಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ. ಆನ್‍ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.

ಕನ್ನಡ ಪುಸ್ತಕ ಪ್ರಾಧಿಕಾರದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ,  ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 458 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.

ಅತ್ಯಂತ ಮೌಲಿಕವಾದ ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರ ಹೊಂದಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಎನ್.ಕರಿಯಪ್ಪ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!