ರಾಜಬೀದಿಗಳಲ್ಲಿ ಸಾಗಿದ ಕಣಿವೆಮಾರಮ್ಮ ದೇವಿಯ ಭವ್ಯ ಮೆರವಣಿಗೆ

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ : ಕಣಿವೆ ಮಾರಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನ ಮೆರವಣಿಗೆ ಗುರುವಾರ ದೇವಸ್ಥಾನದ ಮುಂಭಾಗದಿಂದ ಆರಂಭಗೊಂಡು ಸಕಲ ವಾದ್ಯಗಳೊಂದಿಗೆ ರಾಜ ಬೀದಿಗಳಲ್ಲಿ ಸಾಗಿತು. ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಯೀಂರವರು ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಬಸವಮಂಟಪ ಮುಂಭಾಗದಿಂದ ದೊಡ್ಡಪೇಟೆ, ಉಚ್ಚಂಗಿಯಲ್ಲಮ್ಮ ದೇವಸ್ಥಾನದ ಮುಂಭಾಗ, ಚಿಕ್ಕಪೇಟೆ, ಆನೆಬಾಗಿಲು, ಗಾಂಧಿವೃತ್ತ, ಬಿ.ಡಿ.ರಸ್ತೆ ಮೂಲಕ ಸಾಗಿದ ಮೆರವಣಿಗೆ ದೇವಸ್ಥಾನಕ್ಕೆ ಹಿಂದಿರುಗಿತು. ಡೊಳ್ಳು, ತಮಟೆ, ಉರುಮೆ, ಕಹಳೆ ಮೆರವಣಿಗೆಯಲ್ಲಿ ಮೊಳಗಿದವು, ವಿವಿಧ ಬಗೆಯ ಆಭರಣ ಹಾಗೂ ಹೂವಿನ ಹಾರಗಳಿಂದ ಕಣಿವೆಮಾರಮ್ಮನನ್ನು ಸಿಂಗರಿಸಲಾಗಿತ್ತು. ತಲೆಯ ಮೇಲೆ ದೇವರುಗಳನ್ನು ಹೊತ್ತಿದ್ದ ಮಹಿಳೆಯರು ಮೆರವಣಿಗೆಯಲ್ಲಿ ಕುಣಿದು ಸಂಭ್ರಮಿಸಿದರು.

ನಿವೃತ್ತ ಸಬ್‌ಇನ್ಸ್ಪೆಕ್ಟರ್‌ಗಳಾದ ಶ್ಯಾಂಪ್ರಸಾದ್, ಕೆ.ಪಿ.ವೆಂಕಟೇಶ್, ನಿವೃತ್ತ ಎ.ಎಸ್.ಐ.ಗಳಾದ ನಾಗೇಂದ್ರಪ್ರಸಾದ್, ನಾಗೇಂದ್ರಪ್ಪ, ಮಹೇಶ್ವರಯ್ಯ, ಲಕ್ಷಿö್ಮನರಸಿಂಹಸ್ವಾಮಿ, ಮಹೇಶ್ವರಪ್ಪ, ಉಪ್ಪಾರ ಸಮಾಜದ ಮುಖಂಡ ಆರ್.ಮೂರ್ತಿ ಸೇರಿದಂತೆ ಪೊಲೀಸ್ ಇಲಾಖೆ ಅನೇಕ ನಿವೃತ್ತರು ಮೆರವಣಿಗೆಯಲ್ಲಿ ಭಾಗವಹಿಸಿ ಕಣಿವೆಮಾರಮ್ಮನಿಗೆ ಭಕ್ತಿ ಸಮರ್ಪಿಸಿದರು.

 

 

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago