ಪೌರಾಯುಕ್ತ ಜಿ.ಟಿ.ಹನುಮಂತರಾಜುರವರಿಗೆ ಭಾವಪೂರ್ಣ ವಿದಾಯ

1 Min Read

ಚಿತ್ರದುರ್ಗ, (ಡಿ.02) : ಕಳೆದ ನವೆಂಬರ್ 30 ರಂದು ನಿಧನರಾದ ಚಿತ್ರದುರ್ಗ ನಗರಸಭೆ ಪೌರಾಯುಕ್ತ ಜಿ.ಟಿ.ಹನುಮಂತರಾಜುರವರ ಪಾರ್ಥಿಕ ಶರೀರವನ್ನು ಶುಕ್ರವಾರ ಇಲ್ಲಿನ ನಗರಸಭೆ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು.

ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್, ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಪ್ರಭಾಕರ್, ಯೋಜನಾ ನಿರ್ದೇಶಕ ಸತೀಶ್‍ರೆಡ್ಡಿ, ನಗರಸಭೆ ಸದಸ್ಯರು, ಪೌರ ಕಾರ್ಮಿಕರು, ನಗರಸಭೆ ಸಿಬ್ಬಂದಿ, ದಲಿತ ಮುಖಂಡರುಗಳಾದ ಡಿ.ದುರುಗೇಶಪ್ಪ, ಕೆ.ರಾಜಣ್ಣ ಸೇರಿದಂತೆ ಅಪಾರ ಸಂಖ್ಯೆಯ ಸಾರ್ವಜನಿಕರು ಅಂತಿಮ ದರ್ಶನ ಪಡೆದು ಭಾವಪೂರ್ಣ ವಿದಾಯ ಹೇಳಿದರು.

ನಂತರ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

Share This Article
Leave a Comment

Leave a Reply

Your email address will not be published. Required fields are marked *