ಕುರುಗೋಡು. ನ.22
ಇದೆ ತಿಂಗಳ 25 ರಂದು ಬೆಂಗಳೂರಿನ ಪುರ ಭವನ ಟೌನ್ ಹಾಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆ ಹಮ್ಮಿಕೊಂಡಿರುವ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಾಮಾಜಿಕ ನ್ಯಾಯಕ್ಕಾಗಿ ಸಂವಿಧಾನದ ಉಳಿವಿಗಾಗಿ ಮೂಲ ನಿವಾಸಿಗಳ ಸಂಕಲ್ಪ ಸಮಾವೇಶ ನಡೆಯಲಿದ್ದು ಈ ಒಂದು ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಜನ ಬರಲಿದ್ದು ಜೊತೆಗೆ ಬಳ್ಳಾರಿ ಜಿಲ್ಲೆಯಿಂದ ಅಂಬೇಡ್ಕರ್ ಅನುಯಾಯಿಗಳು, ಸಮಾಜದ ಮುಖಂಡರು, ಯುವಕರು, ಬುದ್ದಿ ಜೀವಿಗಳು, ಪ್ರಗತಿಪರ ಸಂಘಟನೆಯ ಮುಖಂಡರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಹೋಗಿ ಭಾಗವಹಿಸ ಬೇಕು ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ಕುರುಗೋಡಿನ ಬೈಲೂರು ಲಿಂಗಪ್ಪ ತಿಳಿಸಿದ್ದಾರೆ.
ಈ ಒಂದು ಕಾರ್ಯಕ್ರಮದ ಉದ್ಘಾಟನೆ ಯನ್ನು ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ರು ಹಾಗೂ ಶಾಸಕರಾದ ಸತೀಶ್ ಜಾರಕಿಹೊಳಿ ನೆರೆವೇರಿಸಲಿದ್ದಾರೆ. ದಿವ್ಯ ಸಾನಿಧ್ಯವನ್ನು ಪೀಠದ್ಯಕ್ಷರು ಉರಿಲಿಂಗ ಪೆದ್ದಿಮಠದ ಮೈಸೂರಿನ ಶ್ರೀ ಜ್ಞಾನ ಪ್ರಕಾಶ್ ಬಂತೇಜಿ ಯವರು ವಹಿಸಲಿದ್ದಾರೆ. ಸಂಘಟನೆಯ ರಾಜ್ಯದ ವಿವಿಧ ಕಡೆಯ ಹೋರಾಟಗರು, ಪ್ರಗತಿ ಪರ ಚಿಂತಕರು, ಕಲಾವಿದರು, ಸಾಹಿತಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ನಂತರ ಮಾತನಾಡಿದ ಅವರು ಇನ್ನೂ ಸಂಕಲ್ಪ ಸಮಾವೇಶದಲ್ಲಿ ಹಲವಾರು ವಿಚಾರಗಳು, ಸಂವಿಧಾನದ ಆಶಯಗಳ ಬಗ್ಗೆ ಪ್ರಗತಿ ಪರ ಚಿಂತಕರು ಮಂಡಿಸಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಅಲ್ಲದೆ ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟ್ರಕ್ಕೆ ಸಂವಿಧಾನ ಅರ್ಪಣೆಗೊಂಡಿರುತ್ತದೆ. ಇದರಿಂದ ದೇಶದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನ-ಮಾನ ಮತ್ತು ಅವಕಾಶಗಳ ಸಮಾನತೆಯ ಅವಕಾಶ ಲಭಿಸಿದೆ ಆದ್ದರಿಂದ ಬಳ್ಳಾರಿಯಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಹೋಗಿ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.