Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು ಭೀಕರ ಅಪಘಾತ : ಕಾರಿನ ಮೇಲೆ ಬಿದ್ದ ಲಾರಿ, 6 ಜನ ಅಪ್ಪಚ್ಚಿ..!

---Advertisement---

 

ಬೆಂಗಳೂರು: ಆಯಸ್ಸು ಗಟ್ಟಿ ಇದ್ದರೆ ಬಂಡೆ ಕಲ್ಲು ತಲೆ ಮೇಲೆ ಬಿದ್ದರು ಬದುಕುತ್ತಾರೆ. ಆಯಸ್ಸು ಮುಗಿದಿದ್ದರೆ ಒಂದು ಹುಲ್ಲು ಕಡ್ಡಿ ಸಾಕು ಅಂತಾರೆ. ಇವತ್ತು ಆ ವಿಧಿ ಮಜ್ಕಳು ಸೇರಿದಂತೆ ಕುಟುಂಬವನ್ನೇ ಬಲಿ ಪಡೆದಿದೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಅಪಘಾತದ ತೀವ್ರತೆ ಇಬ್ಬರು ಮಕ್ಕಳು ಸೇರಿದಂತೆ ಆರು ಜನರನ್ನು ಬಲಿ ಪಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿ ಆರು ಜನ ಅಸುನೀಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಕಾರಿನಲ್ಲಿಯೇ ಅಪ್ಪಚ್ಚಿಯಾಗಿದ್ದಾರೆ. ಈ ದುರಂತ ಅಂತ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ಮಕ್ಕಳ ದೇಹ ಅಪ್ಪಚ್ಚಿಯಾಗಿರುವ ದೃಶ್ಯ ಎಂಥವರ ಹೃದಯವನ್ನು ಕುಗ್ಗಿಸಿದೆ.

ಲಾರಿ ಏಕಾಏಕಿಯಾಗಿ ಕಾರಿನ ಮೇಲೆ ಬಿದ್ದಿದೆ. ಇದರಿಂದ ಕಾರಿನಲ್ಲಿದ್ದವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಇಬ್ಬರು ಮಕ್ಕಳು ಕೂಡ ಇದ್ದರು‌. ಅಪಘಾತದ ಸ್ಥಳಕ್ಕೆ ಸ್ಥಳೀಯರು ಕೂಡ ಓಡಿ ಬಂದಿದ್ದಾರೆ. ಕಾರಿನ ಮೇಲಿದ್ದ ಲಾರಿಯನ್ನು ಪೊಲೀಸರು ಎತ್ತಿಸಿದ್ದು, ಶವಗಳನ್ನು ಹೊರ ತೆಗೆದಿದ್ದಾರೆ. ಅವರ ಕುಟುಂಬಸ್ಥರ ಬಗ್ಗೆ ಮಾಹಿತಿ ಕಲೆ ಹಾಕಿ, ಅವರಿಗೂ ವಿಷಯ ತಿಳಿಸಲಿದ್ದಾರೆ. ಈ ಅಪಘಾತದ ಫೋಟೋಗಳು ವೈರಲ್ ಆಗುತ್ತಿದ್ದು, ಅದರ ತೀವ್ರತೆ ಹೇಗಿದೆ ಎಂಬುದು ದೃಶ್ಯದಿಂದಾನೇ ಕಾಣಿಸುತ್ತಿದೆ. ಈ ಘಟನೆಯಿಂದಾಗಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಒಂದಷ್ಟು ಕಾಲ ಟ್ರಾಫಿಕ್ ಕಿರಿಕಿರಿ ಅನುಭವಿಸಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment