Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

---Advertisement---

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಸಂಚರಿಸುವ ರನ್‌ವೇ ಪ್ರದೇಶಕ್ಕೆ ಅನಿರೀಕ್ಷಿತವಾಗಿ ಬೃಹತ್ ಬಲೂನ್ ಒಂದು ಹಾರಿಬಂದಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದೆ.

ಬಲೂನ್ ರನ್‌ವೇ ಮೇಲೆ ಬಿದ್ದ ಸಮಯದಲ್ಲಿ ಯಾವುದೇ ವಿಮಾನಗಳು ಟೇಕ್‌ಆಫ್ ಅಥವಾ ಲ್ಯಾಂಡಿಂಗ್ ಆಗುತ್ತಿರಲಿಲ್ಲ. ಒಂದು ವೇಳೆ ವಿಮಾನ ಸಂಚಾರವಿದ್ದಿದ್ದರೆ ಇಂಜಿನ್‌ ಒಳಗೆ ಬಲೂನ್ ಸಿಲುಕಿ ದೊಡ್ಡ ಮಟ್ಟದ ಸ್ಫೋಟ ಅಥವಾ ಅಪಘಾತ ಸಂಭವಿಸುವ ಸಾಧ್ಯತೆಯಿತ್ತು.

ತನಿಖೆಯ ಪ್ರಕಾರ, ಈ ಬಲೂನ್ ಬಿಸಿಡಿ ಕನ್‌ಸ್ಟ್ರಕ್ಷನ್ ಎಂಬ ಖಾಸಗಿ ಕಂಪನಿಗೆ ಸೇರಿದ್ದಾಗಿದೆ. ನಿರ್ಮಾಣ ಹಂತದ ಕಟ್ಟಡದ ಬಳಿ ಜಾಹೀರಾತಿಗಾಗಿ ಕಟ್ಟಲಾಗಿದ್ದ ಈ ಬಲೂನ್, ಗಾಳಿಯ ತೀವ್ರತೆಗೆ ದಾರ ತುಂಡಾಗಿ ನೇರವಾಗಿ ವಿಮಾನ ನಿಲ್ದಾಣದ ಸೂಕ್ಷ್ಮ ಪ್ರದೇಶಕ್ಕೆ ಹಾರಿ ಬಂದಿದೆ. ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಬಿಸಿಡಿ ಕನ್‌ಸ್ಟ್ರಕ್ಷನ್ ಕಂಪನಿ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now