Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಪ್ರಮುಖ ರಸ್ತೆಗೆ ಖ್ಯಾತ ನಟ ಡಾ.ವಿಷ್ಣುವರ್ಧನ್ ಹೆಸರು  ನಾಮಕರಣ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಡಿ.27): ನಗರದ ಪಂಚಾಚಾರ್ಯ ಕಲ್ಯಾಣ ಮಂಟಪ ಮುಂಭಾಗ ಡಬ್ಬಲ್ ರಸ್ತೆಗೆ ಸಾಹಸಸಿಂಹ ಡಾ.ವಿಷ್ಣುವರ್ಧನ್ ರಸ್ತೆ ಎಂದು ನಾಮಕರಣ ಮಾಡಲಾಯಿತು.

ಕರ್ನಾಟಕ ರಾಜ್ಯ ಡಾ.ವಿಷ್ಣುವರ್ಧನ್‍ರವರ ಆದರ್ಶ ಬಳಗದ ರಾಜ್ಯಾಧ್ಯಕ್ಷ ಸಿ.ಕೆ.ಗೌಸ್‍ಪೀರ್ ಮಂಗಳವಾರ ಡಾ.ವಿಷ್ಣುವರ್ಧನ್ ರಸ್ತೆ ನಾಮಫಲಕವನ್ನು ಉದ್ಘಾಟಿಸಿ ಮಾತನಾಡುತ್ತ 2018 ರಲ್ಲಿಯೇ ರಾಜ್ಯ ಸರ್ಕಾರದಿಂದ ಆದೇಶವಾಗಿದ್ದರೂ ಕಾರಣಾಂತರಗಳಿಂದ ರಸ್ತೆಗೆ ವಿಷ್ಣುವರ್ಧನ್ ಹೆಸರನ್ನು ಇಟ್ಟಿರಲಿಲ್ಲ. ನಾಗರಹಾವು ಚಿತ್ರದ ಮೂಲಕ ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ನಾಡಿಗೆ ಪರಿಚಯಿಸಿದ ಡಾ.ವಿಷ್ಣುವರ್ಧನ್ ಚಿತ್ರರಂಗ ಪ್ರವೇಶಿಸಿ ಇಂದಿಗೆ ಐವತ್ತು ವರ್ಷಗಳಾಗಿರುವ ಸವಿನೆನಪಿಗಾಗಿ ಮದಕರಿನಾಯಕನ ಪ್ರತಿಮೆ ಮುಂಭಾಗದಿಂದ ಚಳ್ಳಕೆರೆ ಟೋಲ್‍ಗೇಟ್ ಕೂಡುವ ರಸ್ತೆವರೆಗೆ ಡಾ.ವಿಷ್ಣುವರ್ಧನ್ ರಸ್ತೆ ಎಂಬ ಹೆಸರಿಡಲಾಗಿದೆ. ಎಂದು ಹೇಳಿದರು.

ಕರ್ನಾಟಕ ರಾಜ್ಯ ಡಾ.ವಿಷ್ಣುವರ್ಧನ್ ಆದರ್ಶ ಬಳಗದ ಪುನಿತ್ ಕಬ್ಬಿಣದ, ಬಾಬು, ಶೇಖ್ ಅಹಮದ್, ರವಿ, ನಾಗೇಶ್, ಬಿ.ಸಿ.ನಾಗರಾಜಚಾರಿ, ತಿಪ್ಪೇಸ್ವಾಮಿ, ರಾಜೇಶ್, ಪ್ರವೀಣ್, ಶೇಖ್ ಕಲೀಂವುಲ್ಲಾ, ಮಹಮದ್ ಜಿಕ್ರಿಯಾವುಲ್ಲಾ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

ಬರಗೇರಮ್ಮ ದೇವಸ್ಥಾನದ ಪೂಜಾರಿ ನಾಗೇಶ್ ಸಿಹಿ ವಿತರಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!