Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಗಳನ್ನು ಕೊಡಲಿಲ್ಲ ಅಂತ ಮೈಸೂರಲ್ಲೊಬ್ಬ 3 ಎಕರೆ ಅಡಿಕೆ ತೋಟವನ್ನೇ ಕಡಿದು ಹಾಕಿದ್ದಾನೆ..!

---Advertisement---

 

ಕೃಷಿ ಮಾಡುವುದು ಸುಲಭದ ಕೆಲಸವೇನು ಅಲ್ಲ. ಗಿಡಗಳನ್ನು ಮಕ್ಕಳಂತೆ ನೋಡಿಕೊಳ್ಳಬೇಕು. ಅಲ್ಲಿಬ್ಬ ರೈತ ಕೂಡ ಮೂರು ಎಕರೆಯಲ್ಲಿ ಅಡಿಕೆ ಗಿಡಗಳನ್ನು ಮಗುವಿನಂತೆ ಸಾಕಿದ್ದ. ಇನ್ನೇನು ಕೆಲವೇ ವರ್ಷದಲ್ಲಿ ಕೈಗೆ ಬಂದು, ಫಸಲು ಕೊಡಬೇಕು ಎನ್ನುವಷ್ಟರಲ್ಲಿ ಅಡಿಕೆ ಗಿಡಗಳೆಲ್ಲಾ ನೆಲದಲ್ಲಿ ಮಲಗಿವೆ. ಈ ಘಟನೆ ನಡೆದಿರೋದು ಹುಣಸೂರು ತಾಲೂಕಿನ ಕಡೇ ಮನುಗನಹಳ್ಳಿ ಗ್ರಾಮದಲ್ಲಿ.

ವೆಂಕಟೇಶ್ ಎಂಬಾತರ ಜಮೀನಿನಲ್ಲಿ ಈ ಘಟನೆ ನಡೆದಿರೋದು. ವೆಂಕಟೇಶ್ ಅವರಿಗೆ ಒಬ್ಬ ಮಗಳಿದ್ದಾಳೆ. ಅದೇ ಗ್ರಾಮದ ಅಶೋಕ್ ಎಂಬಾತನಿಗೆ ಕೊಟ್ಟು ಮದುವೆ ಮಾಡಬೇಕು ಮಬ ಮಾತುಕತೆ ನಡೆದಿತ್ತು. ಆದರೆ ಹುಡುಗ ಸರಿ ಇಲ್ಲ ಎಂಬ ವಿಚಾರ ಗೊತ್ತಾಗಿ, ಮಗಳನ್ನು ಕೊಡುವ ನಿರ್ಧಾರದಿಂದ ವೆಂಕಟೇಶ್ ಹಿಂದೆ ಸರಿದಿದ್ದಾರೆ. ಇದೇ ದ್ವೇಷಕ್ಕೆ ಅಶೋಕ್ ಬೆಳೆ ನಾಶ ಮಾಡಿದ್ದಾನೆ ಎನ್ನಲಾಗುತ್ತಿದೆ.

ಅಡಿಕೆ ಮಾತ್ರವಲ್ಲ, ವೆಂಕಟೇಶ್ ತಮ್ಮ ಇನ್ನು ಅರ್ಧ ಎಕರೆಯಲ್ಲಿ ಶುಂಠಿಯನ್ನು ಬೆಳೆದಿದ್ದರು. ಮಗಳನ್ನು ಕೊಡಲಿಲ್ಲವಲ್ಲ ಎಂಬ ದ್ವೇಷಕ್ಕೆ ಅಡಿಕೆಗೂ ಮೊದಲು ಶುಂಠಿ ಬೆಳೆಯನ್ನು ನಾಶ ಮಾಡಿದ್ದನಂತೆ. ಬಳಿಕ ಅಡಿಕೆ ಬೆಳೆಯನ್ನು ನಾಶ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇಷ್ಟೊಂದು ಬೆಳೆ ನಾಶ ಮಾಡಿದ್ದು, ಮಾಲೀಕನ ನೋವಿಗೆ ಕಾರಣವಾಗಿದೆ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದ ಬೆಳೆ ಈಗ ನೆಲ ಕಚ್ಚಿರುವುದಕ್ಕೆ ವೆಂಕಟೇಶ್ ಕಣ್ಣೀರು ಸುರಿಸುತ್ತಿದ್ದಾರೆ. ಈ ಸಂಬಂಧ ಅಶೋಕ್ ಮೇಲೆ ದೂರನ್ನು ನೀಡಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಬಂಧ ದೂರು ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment