Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಶವವವಾಗಿ ಪತ್ತೆ..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 20 : ರಾಜ್ಯದ ಎಲ್ಲೆಡೆ ಉತ್ತಮ‌ಮಳೆಯಾಗುತ್ತಿದೆ.‌ ಕೆರೆ, ಕಟ್ಟೆಗಳು ತುಂಬುತ್ತಿವೆ. ನೀರು ಎಲ್ಲೆಡೆ ಹರಿಯಲು ಶುರುವಾಗಿದೆ. ಸಾಕಷ್ಟು ಕಡೆ ನೀರಿನಿಂದ ಅಪಾಯವೂ ಉಂಟಾಗಿದೆ. ಅದರಲ್ಲೂ ಕೆರೆಗಳಲ್ಲಿ, ಹರಿಯುವ ನೀರಿನಲ್ಲಿ ಮೀನು ಹಿಡಿಯುವ ಕ್ರೇಜು ಜನರಲ್ಲಿ ಇದೆ. ಹೀಗೆ ಮೀನು ಹಿಡಿಯಲು ಹೋದವ ಜೀವಂತವಾಗಿ ವಾಪಾಸ್ ಆಗದೆ ಇರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

39 ವರ್ಷದ ಶಿವು ಎಂಬಾತ ಮೀನು ಹಿಡಿಯಲು ಹೋಗಿ ಸಾವನ್ನಪ್ಪಿದ್ದಾನೆ. ಕೆಲ್ಲೋಡು ಬಳಿ ಮೀನು ಹಿಡಿಯುವಾಗ ಈ ದುರ್ಘಟನೆ ನಡೆದು, ಶಿವು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮುತ್ತಾಗುಂದಿ ಗ್ರಾಮದ ಬಳಿಯ ಕೆಲ್ಲೋಡು ಬಳಿ ಈ ಘಟನೆ ನಡೆದಿದೆ.

ವೇದಾವತಿ ನದಿಯ ನೀರು ಜೋರಾಗಿಯೇ ಹರಿಯುತ್ತಿದೆ. ಹರಿಯುವ ನೀರಿನಲ್ಲಿ ಮೀನುಗಳು ತೇಲಿ ಬರುತ್ತವೆ. ಹೀಗಾಗಿ ಮೀನು ಹಿಡಿಯಲು ಶಿವು ಕೂಡ ತೆರಳಿದ್ದರು. ಆದರೆ ದುರಾದೃಷ್ಟವಶಾತ್ ಮೀನು ಹಿಡಿಯುವಾಗ ಕಾಲು ಜಾರಿ ನದಿಗೆ ಬಿದ್ದಿದ್ದಾರೆ. ಮೃತ ಶಿವು ಜಾನಕಲ್ ಗ್ರಾಮದವರು. ನದಿಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶಿವು ಮೃತದೇಹ ಮುತ್ತಾಗುಂದಿ ಗ್ರಾಮದ ಬಳಿ ಪತ್ತೆಯಾಗಿದೆ.

ಈ ವಿಷಯ ತಿಳಿದು ಕುಟುಂಬಸ್ಥರ ಅಳಲು ಮುಗಿಲು ಮುಟ್ಟಿದೆ. ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ದುಃಖ ಹೆಚ್ಚಾಗಿದೆ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದೆ.

ಮಳೆ ಜೋರಾಗಿದೆ, ನೀರಿನ ರಭಸವೂ ಹೆಚ್ಚಾಗಿದೆ. ಹೀಗಾಗಿ ಓಡಾಡುವ ಜನ, ಈ ರೀತಿ ಮೀನು ಹಿಡಿಯಬೇಕೆಂದುಕೊಳ್ಳುವವರು, ನೀರಿನ ಜೊತೆಗೆ ಸೆಲ್ಫಿ ತೆಗೆದುಕೊಳ್ಳಬೇಕೆಂದವರು ಕೊಂಚ ಎಚ್ಚರದಿಂದ ಇರಿ. ನಿಮ್ಮನ್ನೇ ನಂಬಿಕೊಂಡವರು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡದಿರಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!