Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಶವವವಾಗಿ ಪತ್ತೆ..!

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 20 : ರಾಜ್ಯದ ಎಲ್ಲೆಡೆ ಉತ್ತಮ‌ಮಳೆಯಾಗುತ್ತಿದೆ.‌ ಕೆರೆ, ಕಟ್ಟೆಗಳು ತುಂಬುತ್ತಿವೆ. ನೀರು ಎಲ್ಲೆಡೆ ಹರಿಯಲು ಶುರುವಾಗಿದೆ. ಸಾಕಷ್ಟು ಕಡೆ ನೀರಿನಿಂದ ಅಪಾಯವೂ ಉಂಟಾಗಿದೆ. ಅದರಲ್ಲೂ ಕೆರೆಗಳಲ್ಲಿ, ಹರಿಯುವ ನೀರಿನಲ್ಲಿ ಮೀನು ಹಿಡಿಯುವ ಕ್ರೇಜು ಜನರಲ್ಲಿ ಇದೆ. ಹೀಗೆ ಮೀನು ಹಿಡಿಯಲು ಹೋದವ ಜೀವಂತವಾಗಿ ವಾಪಾಸ್ ಆಗದೆ ಇರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

39 ವರ್ಷದ ಶಿವು ಎಂಬಾತ ಮೀನು ಹಿಡಿಯಲು ಹೋಗಿ ಸಾವನ್ನಪ್ಪಿದ್ದಾನೆ. ಕೆಲ್ಲೋಡು ಬಳಿ ಮೀನು ಹಿಡಿಯುವಾಗ ಈ ದುರ್ಘಟನೆ ನಡೆದು, ಶಿವು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮುತ್ತಾಗುಂದಿ ಗ್ರಾಮದ ಬಳಿಯ ಕೆಲ್ಲೋಡು ಬಳಿ ಈ ಘಟನೆ ನಡೆದಿದೆ.

ವೇದಾವತಿ ನದಿಯ ನೀರು ಜೋರಾಗಿಯೇ ಹರಿಯುತ್ತಿದೆ. ಹರಿಯುವ ನೀರಿನಲ್ಲಿ ಮೀನುಗಳು ತೇಲಿ ಬರುತ್ತವೆ. ಹೀಗಾಗಿ ಮೀನು ಹಿಡಿಯಲು ಶಿವು ಕೂಡ ತೆರಳಿದ್ದರು. ಆದರೆ ದುರಾದೃಷ್ಟವಶಾತ್ ಮೀನು ಹಿಡಿಯುವಾಗ ಕಾಲು ಜಾರಿ ನದಿಗೆ ಬಿದ್ದಿದ್ದಾರೆ. ಮೃತ ಶಿವು ಜಾನಕಲ್ ಗ್ರಾಮದವರು. ನದಿಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶಿವು ಮೃತದೇಹ ಮುತ್ತಾಗುಂದಿ ಗ್ರಾಮದ ಬಳಿ ಪತ್ತೆಯಾಗಿದೆ.

ಈ ವಿಷಯ ತಿಳಿದು ಕುಟುಂಬಸ್ಥರ ಅಳಲು ಮುಗಿಲು ಮುಟ್ಟಿದೆ. ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ದುಃಖ ಹೆಚ್ಚಾಗಿದೆ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದೆ.

ಮಳೆ ಜೋರಾಗಿದೆ, ನೀರಿನ ರಭಸವೂ ಹೆಚ್ಚಾಗಿದೆ. ಹೀಗಾಗಿ ಓಡಾಡುವ ಜನ, ಈ ರೀತಿ ಮೀನು ಹಿಡಿಯಬೇಕೆಂದುಕೊಳ್ಳುವವರು, ನೀರಿನ ಜೊತೆಗೆ ಸೆಲ್ಫಿ ತೆಗೆದುಕೊಳ್ಳಬೇಕೆಂದವರು ಕೊಂಚ ಎಚ್ಚರದಿಂದ ಇರಿ. ನಿಮ್ಮನ್ನೇ ನಂಬಿಕೊಂಡವರು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡದಿರಿ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment