Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಹೋರಾಟಗಾರ ಮುರುಘರಾಜೇಂದ್ರ ಒಡೆಯರ್ ಒಂದು ನೆನಪು ಕಾರ್ಯಕ್ರಮ : ಜೆ.ಯಾದವರೆಡ್ಡಿ ಅವರಿಂದ ಉದ್ಘಾಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.25  : ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ, ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ, ಭ್ರಷ್ಟಾಚಾರ ವಿರೋಧಿ ಸೇನೆ ಸಂಯುಕ್ತಾಶ್ರಯದಲ್ಲಿ ಹೋರಾಟಗಾರ ಮುರುಘರಾಜೇಂದ್ರ ಒಡೆಯರ್ ಒಂದು ನೆನಪು ಕಾರ್ಯಕ್ರಮ ಡಿ.26 ರಂದು ಬೆಳಿಗ್ಗೆ 11 ಕ್ಕೆ ಪತ್ರಕರ್ತರ ಭವನದಲ್ಲಿ ನಡೆಯಲಿದೆ.
ಸಾಮಾಜಿಕ ಚಿಂತಕ ಜೆ.ಯಾದವರೆಡ್ಡಿ ಕಾರ್ಯಕ್ರಮ ಉದ್ಗಾಟಿಸಲಿದ್ದಾರೆ.

ಕೆ.ಕೆ.ಎನ್.ಎಸ್.ಎಸ್.ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ನಗರಸಭೆ ಮಾಜಿ ಅಧ್ಯಕ್ಷರುಗಳಾದ ಸಿ.ಟಿ.ಕೃಷ್ಣಮೂರ್ತಿ, ಬಿ.ಕಾಂತರಾಜ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ರೆವೆರೆಂಡ್ ಫಾದರ್ ಎಂ.ಎಸ್.ರಾಜು, ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ, ಸಾಹಿತಿ ಪರಶುರಾಮ್ ಗೊರಪ್ಪರ್, ಪಾರ್ಥರಾಜೇಂದ್ರ ಒಡೆಯರ್, ಬಡಗಿ ಕಾರ್ಮಿಕರ ಸಂಘದ ಅಧ್ಯಕ್ಷ ಎ.ಜಾಕೀರ್‍ಹುಸೇನ್, ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‍ಕುಮಾರ್, ಪಿ.ಸುಭಾನುಲ್ಲಾ, ಸವಿತಾ ಸಮಾಜದ ಹಿರಿಯ ಮುಖಂಡ ಓ.ನರಸಿಂಹಮೂರ್ತಿ ಇವರುಗಳು ಆಗಮಿಸಲಿದ್ದಾರೆಂದು ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ಎಂ.ಹನೀಫ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment