Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಾಯಿ ಮಗನಿಗೆ ಎಲ್ಲವನ್ನೂ ಕೊಡುತ್ತಾಳೆ : ಡಿಕೆ ಶಿವಕುಮಾರ್

Facebook
Twitter
Telegram
WhatsApp

 

 

ಬೆಂಗಳೂರು : 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದಿದೆ. ಸರ್ಕಾರ ರಚನೆ ಮಾಡುವುದಕ್ಕೆ ಸಿದ್ಧತೆ ನಡೆಸಿದೆ. ಅದಕ್ಕೂ ಮುನ್ನ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಖುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ. ಸಿದ್ದರಾಮಯ್ಯ ಅಥವಾ ಡಿಕೆ ಶಿವಕುಮಾರ್ ನಡುವೆಯೇ ಕಾಂಪಿಟೇಷನ್ ಇದೆ. ಈ ಸಂಬಂಧ ಇದೀಗ ಡಿಕೆ ಶಿವಕುಮಾರ್ ಮಾತನಾಡಿದ್ದು, ಸಿದ್ದರಾಮಯ್ಯ ಅವರಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.

ನಾನು ಪಕ್ಷದ ಒಂದು ಭಾಗವಾಗಿದ್ದೇನೆ ಅಷ್ಟೇ. ಊಹೆ ಮಾಡದೆ ಇದ್ದರೂ ತಾಯಿ ಮಗನಿಗೆ ಎಲ್ಲವನ್ನೂ ಕೊಡುತ್ತಾಳೆ. ಅವತ್ತು ಸೋನಿಯಾ ಗಾಂಧಿ ಅವರು ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಹೇಳಿ ಅಧ್ಯಕ್ಷ ಸ್ಥಾನ ನೀಡಿದ್ದರು. ಕೊಟ್ಟ ಮಾತಿನಂತೆ ಅಧಿಕಾರಕ್ಕೆ ತಂದಿದ್ದೇವೆ. ಚಾಚು ತಪ್ಪದೆ ಅದನ್ನು ಪಾಲಿಸಿ, ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿದೆ.

2024ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20 ಸೀಟುಗಳನ್ನು ಪಡೆದುಕೊಂಡು ಬರುವ ಕಡೆಗೆ ಗಮನ ಹರಿಸುತ್ತೇವೆ. ಇದನ್ನು ಚಾಲೆಂಜಿಂಗ್ ಆಗಿ ತೆಗೆದುಕೊಂಡಿದ್ದೇವೆ. ಯಾರನ್ನೂ ಬ್ಲಾಕ್ ಮೇಲ್ ಮಾಡುವವನು ನಾನಲ್ಲ. ನನ್ನಿಂದ ಆ ರೀತಿಯೆಲ್ಲಾ ಊಹಿಸಬೇಡಿ. ನನಗೆ ನನ್ನದೇ ಆದ ಅಸ್ತಿತ್ವವಿದೆ. ನಾನು ಟೀಕೆಗಳಿಗೆ ಹೆದರಿ ಪಲಾಯನ ಮಾಡುವುದಿಲ್ಲ ಎಂದಿದ್ದಾರೆ. ಇನ್ನು ಸಿದ್ದರಾಮಯ್ಯ ಅವರು ನನಗೆ ಶಾಸಕರ ಬೆಂಬಲವಿದೆ ಎಂದು ಹೇಳಿದ ಮಾತಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!