ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 04 : ಚಿತ್ರದುರ್ಗ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ನಿಕಟ ಪೂರ್ವ ಅಧ್ಯಕ್ಷರಾದ ಎ. ಮುರಳಿಯವರನ್ನು ದಾವಣಗೆರೆ ವಿಭಾಗೀಯ ಸಂಘಟನ್ಮಾಕ ಸಹ ಪ್ರಬಾರಿಗಳನ್ನಾಗಿ ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರರವರು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.
ದಾವಣಗೆರೆ ವಿಭಾಗಕ್ಕೆ ಚಿತ್ರದುರ್ಗ, ದಾವಣಗೆರೆ, ಮಧುಗಿರಿ ಮತ್ತು ತುಮಕೂರು ಜಿಲ್ಲೆ ಒಳಗೊಂಡಿದ್ದು ಇಲ್ಲಿ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಜೊತೆಗೆ ಮುಂಬರುವ ವಿವಿಧ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲಿಸುವ ಹೊಣೆಯನ್ನು ಸಹಾ ಹೊರಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಅನುಭವನ್ನು ಹೊಂದಿದ್ದು, ಅವರನ್ನು ದಾವಣಗೆರೆ ವಿಭಾಗೀಯ ಸಹಾ ಪ್ರಬಾರಿಗಳನ್ನಾಗಿ ನೇಮಕ ಮಾಡಲಾಗಿದೆ.




