Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರೈತರಿಗಾಗಿ ಸರ್ಕಾರದಿಂದ ಬರ್ತಿದೆ ಹೊಸ ಆ್ಯಪ್ : ಇದರಲ್ಲಿ ಏನೆಲ್ಲಾ ಮಾಹಿತಿ ಸಿಗಲಿದೆ..?

---Advertisement---

 

ಬೆಂಗಳೂರು: ಕಾಲ ಬದಲಾದಂತೆ, ವಾತಾವರಣ ಬದಲಾದಂತೆ ಕೃಷಿಯ ಮಾದರಿಯೂ ಬದಲಾಗಬೇಕಾದ ಅನಿವಾರ್ಯತೆ ಇದೆ. ಆದ್ರೆ ರೈತರಿಗೆ ಈ ವಿಚಾರದಲ್ಲಿ ಸಾಕಷ್ಟು ಮಾರ್ಗದರ್ಶನದ ಅಗತ್ಯತೆಯೂ ಇದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೃಷಿ ಸಂಬಂಧಿಸಿದಂತೆ ಆ್ಯಪ್ ಬರಲಿದೆಯಂತೆ. ಈ ಸಂಬಂಧ ಸಚಿವ ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.

ಕೃಷಿಗೆ ಸಂಬಂಧಿಸಿದಂತೆ ಬುದ್ದಿ ಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಆ್ಯಪ್ ಒಂದನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದ್ದೇವೆ. ಈ‌ ಮೂಲಕ ಹವಮಾನ ಮತ್ತು‌ ಮಣ್ಣಿನ ಗುಣಮಟ್ಟ ತಿಳಿದುಕೊಳ್ಳುವುದಕ್ಕೆ ಸುಲಭವಾಗಿ ಮಾಹಿತಿ ಸಿಗಲಿದೆ. ಇದು ಎಐ ಆಧಾರಿತ ಸೂಪರ್ ಆ್ಯಪ್ ಮೂಲಕ ಸಾಧ್ಯವಾಗುತ್ತದೆ. ಬೀಜ, ಬೆಳೆ ಮಾದರಿ ಸೇರಿದಂತೆ ಹಲವು ವಿಚಾರಗಳಿಗೆ ಈ ಆ್ಯಪ್ ಉಪಯೋಗವಾಗಲಿದೆ ಎಂದಿದ್ದಾರೆ.

ಕೃತಕ ಬುದ್ಧಿಮತ್ತೆ ಆಧಾರಿತ ಆ್ಯಪ್​ಗೆ ಫೀಡ್ ಮಾಡಬಹುದಾಗಿದೆ. ಇದು ರೈತರ ಅಗತ್ಯಗಳಿಗೆ ಅನುಗುಣವಾಗಿ ಮಾಹಿತಿಯನ್ನು ಒದಗಿಸಲಿದೆ. ಇದಲ್ಲದೆ, ಈ ಆ್ಯಪ್ 14 ಭಾಷೆಗಳಲ್ಲಿ ಕಾರ್ಯನಿರ್ವಹಿಸಲಿದೆ. ಈಗಿರುವ ಕಾಲ್ ಸೆಂಟರ್ ಗಳು ರೈತರಿಗೆ ಸಹಾಯ ಮಾಡುವುದಕ್ಕಿಂತ ಹೆಚ್ಚಿನ ಗೊಂದಲವನ್ನು ಉಂಟುಮಾಡುತ್ತಿದ್ದವು. ಆದ್ದರಿಂದ, ನಾವು ಈ ಎಲ್ಲಾ ಸಹಾಯವಾಣಿಗಳನ್ನು ವಿಲೀನಗೊಳಿಸಲು ಮತ್ತು ರೈತರಿಗೆ ಮಾಹಿತಿ ನೀಡಲು ಕಾಲ್ ಸೆಂಟರ್ ಅನ್ನು ಸ್ಥಾಪಿಸಲು ನಿರ್ಧರಿಸಿದ್ದೆವು ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment