Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರಿಗಾಗಿ ಸರ್ಕಾರದಿಂದ ಬರ್ತಿದೆ ಹೊಸ ಆ್ಯಪ್ : ಇದರಲ್ಲಿ ಏನೆಲ್ಲಾ ಮಾಹಿತಿ ಸಿಗಲಿದೆ..?

Facebook
Twitter
Telegram
WhatsApp

 

ಬೆಂಗಳೂರು: ಕಾಲ ಬದಲಾದಂತೆ, ವಾತಾವರಣ ಬದಲಾದಂತೆ ಕೃಷಿಯ ಮಾದರಿಯೂ ಬದಲಾಗಬೇಕಾದ ಅನಿವಾರ್ಯತೆ ಇದೆ. ಆದ್ರೆ ರೈತರಿಗೆ ಈ ವಿಚಾರದಲ್ಲಿ ಸಾಕಷ್ಟು ಮಾರ್ಗದರ್ಶನದ ಅಗತ್ಯತೆಯೂ ಇದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೃಷಿ ಸಂಬಂಧಿಸಿದಂತೆ ಆ್ಯಪ್ ಬರಲಿದೆಯಂತೆ. ಈ ಸಂಬಂಧ ಸಚಿವ ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.

ಕೃಷಿಗೆ ಸಂಬಂಧಿಸಿದಂತೆ ಬುದ್ದಿ ಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಆ್ಯಪ್ ಒಂದನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದ್ದೇವೆ. ಈ‌ ಮೂಲಕ ಹವಮಾನ ಮತ್ತು‌ ಮಣ್ಣಿನ ಗುಣಮಟ್ಟ ತಿಳಿದುಕೊಳ್ಳುವುದಕ್ಕೆ ಸುಲಭವಾಗಿ ಮಾಹಿತಿ ಸಿಗಲಿದೆ. ಇದು ಎಐ ಆಧಾರಿತ ಸೂಪರ್ ಆ್ಯಪ್ ಮೂಲಕ ಸಾಧ್ಯವಾಗುತ್ತದೆ. ಬೀಜ, ಬೆಳೆ ಮಾದರಿ ಸೇರಿದಂತೆ ಹಲವು ವಿಚಾರಗಳಿಗೆ ಈ ಆ್ಯಪ್ ಉಪಯೋಗವಾಗಲಿದೆ ಎಂದಿದ್ದಾರೆ.

ಕೃತಕ ಬುದ್ಧಿಮತ್ತೆ ಆಧಾರಿತ ಆ್ಯಪ್​ಗೆ ಫೀಡ್ ಮಾಡಬಹುದಾಗಿದೆ. ಇದು ರೈತರ ಅಗತ್ಯಗಳಿಗೆ ಅನುಗುಣವಾಗಿ ಮಾಹಿತಿಯನ್ನು ಒದಗಿಸಲಿದೆ. ಇದಲ್ಲದೆ, ಈ ಆ್ಯಪ್ 14 ಭಾಷೆಗಳಲ್ಲಿ ಕಾರ್ಯನಿರ್ವಹಿಸಲಿದೆ. ಈಗಿರುವ ಕಾಲ್ ಸೆಂಟರ್ ಗಳು ರೈತರಿಗೆ ಸಹಾಯ ಮಾಡುವುದಕ್ಕಿಂತ ಹೆಚ್ಚಿನ ಗೊಂದಲವನ್ನು ಉಂಟುಮಾಡುತ್ತಿದ್ದವು. ಆದ್ದರಿಂದ, ನಾವು ಈ ಎಲ್ಲಾ ಸಹಾಯವಾಣಿಗಳನ್ನು ವಿಲೀನಗೊಳಿಸಲು ಮತ್ತು ರೈತರಿಗೆ ಮಾಹಿತಿ ನೀಡಲು ಕಾಲ್ ಸೆಂಟರ್ ಅನ್ನು ಸ್ಥಾಪಿಸಲು ನಿರ್ಧರಿಸಿದ್ದೆವು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!