Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ತುಮಕೂರು ಜನತೆಗೆ ಹೊಸ ಭರವಸೆ : ವಿ ಸೋಮಣ್ಣ ಗೆದ್ದರೆ 10 ಸಾವಿರ ಕೋಟಿ ತರ್ತಾರಂತೆ..!

---Advertisement---

 

ತುಮಕೂರು: ಬಿರು ಬೇಸಿಗೆಯ ನಡುವೆ ಲೋಕಸಭಾ ಚುನಾವಣೆಯ ಬಿಸಿಯೂ ಕಾವೇರಿದೆ. ಅಭ್ಯರ್ಥಿಗಳಿಂದ ಜನತೆಗೆ ಈಗ ಹೊಸ ಹೊಸ ಭರವಸೆಗಳು ಸಿಗುತ್ತಿವೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ವಿ ಸೋಮಣ್ಣ ಕಣಕ್ಕೆ ಇಳಿದಿದ್ದಾರೆ. ಪ್ರಚಾರದ ನಡುವೆ ತುಮಕೂರು ಜನತೆಗೆ ಹೊಸ ಭರವಸೆ ನೀಡಿದ್ದಾರೆ.

‘ನಾನು ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ 100 ದಿನಗಳ ಒಳಗೆ ಕೇಂದ್ರದಿಂದ ಕಲ್ಪತರು ನಾಡಿಗೆ 10 ಸಾವಿರ ಕೋಟಿ ರೂಪಾಯಿ ಅನುದಾನ ತರುತ್ತೇನೆ. ರಾಯದುರ್ಗ ರೈಲ್ವೆ ಕಾಮಗಾರಿ ಮತ್ತು ಎತ್ತಿನಹೊಳೆ ನೀರಾವರಿ ಯೋಜನೆಗೆ ಮರುಚಾಲನೆ ನೀಡುತ್ತೇನೆ. ಕೇಂದ್ರ ಸರ್ಕಾರದಿಂದ ಕೊರಟಗೆರೆ ಕ್ಷೇತ್ರಕ್ಕೆ ಹೈಟೆಕ್ ಆಸ್ಪತ್ರೆ ತಂದೇ ತರುತ್ತೇನೆ. ಇದು ಕೇವಲ ಭರವಸೆಯಲ್ಲ, ಬಡ ಜನರ ನೋವಿನ ಮನವಿ. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಲಿದ್ದೇವೆ. ಸಿದ್ದರಬೆಟ್ಟ ಮತ್ತು ಏಳು ಸುತ್ತಿನ ಕೋಟೆಯನ್ನು ಪ್ರವಾಸಿ ತಾಣವಾಗಿ ಮಾಡುತ್ತೇವೆ ಎಂದು ವಿ ಸೋಮಣ್ಣ ಭರವಸೆ ನೀಡಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಧುಸ್ವಾಮಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ವಿ ಸೋಮಣ್ಣ ಅವರಿಗೆ ಮಣೆ ಹಾಕಿದೆ. ವಿ ಸೋಮಣ್ಣ ಕೆಲ ಬೇಸರದಿಂದ ಪಕ್ಷ ಬಿಡುವ ಮುನ್ಸೂಚನೆ ನೀಡಿದ್ದರು. ಅವರ ಅಸಮಾಧಾನ ಶಮನ ಮಾಡಿದ ಹೈಕಮಾಂಡ್ ಟಿಕೆಟ್ ನೀಡಿದೆ. ಇನ್ನು ಟಿಕೆಟ್ ಅನೌನ್ಸ್ ಆಗುವುದಕ್ಕೂ ಮೊದಲೇ ವಿ ಸೋಮಣ್ಣ ತುಮಕೂರು ಕ್ಷೇತ್ರದಲ್ಲಿ ವಿ ಸೋಮಣ್ಣ ಆಕ್ಟೀವ್ ಆಗಿದ್ದರು. ಜನರ ಬಳಿ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಇದೀಗ ಟಿಕೆಟ್ ಸಿಕ್ಕಿದ್ದು, ಭರವಸೆ ನೀಡುತ್ತಾ, ಜನರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...