Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಗ್ರ ಸ್ಥಾನಕ್ಕೇರಿ ಹೊಸ ದಾಖಲೆ ಬರೆದ ಶುಭಮನ್ ಗಿಲ್

Facebook
Twitter
Telegram
WhatsApp

ಸುದ್ದಿಒನ್ : ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಐಸಿಸಿ ಬುಧವಾರ ಪ್ರಕಟಿಸಿದ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಗಿಲ್ ಅಗ್ರಸ್ಥಾನಕ್ಕೆ ತಲುಪಿದ್ದಾರೆ. ಗಿಲ್ ನಂ.1 ರ‌್ಯಾಂಕ್ ಅಲಂಕರಿಸಿದ್ದು ಇದೇ ಮೊದಲು.
ಕೆಲ ಸಮಯದಿಂದ ಅದ್ಭುತ ಪ್ರದರ್ಶನ ನೀಡುತ್ತಿರುವ ಗಿಲ್ ಪಾಕ್ ನಾಯಕ ಬಾಬರ್ ಅಜಮ್ ಅವರನ್ನು ಹಿಂದಕ್ಕೆ ತಳ್ಳಿಲ ಅಗ್ರಸ್ಥಾನಕ್ಕೇರಿದ್ದಾರೆ.

ಈಗ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲೂ ಗಿಲ್ ಆಡುತ್ತಿದ್ದಾರೆ. ಜ್ವರದಿಂದ ಮೊದಲ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ಈ ಯುವ ಆರಂಭಿಕ ಆಟಗಾರ, ನಂತರ ಪಂದ್ಯಗಳಿಗೆ ರೀ ಎಂಟ್ರಿ ಕೊಟ್ಟಿದ್ದರು. ಪ್ರಸ್ತುತ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಗಿಲ್ 830 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಬಾಬರ್ 824 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಗಿಲ್ ಅವರದು ಅಪರೂಪದ ಸಾಧನೆ :
ಏಕದಿನದಲ್ಲಿ ವಿಶ್ವದ ನಂಬರ್ 1 ಬ್ಯಾಟ್ಸ್ ಮನ್ ಎನಿಸಿಕೊಂಡಿರುವ ಗಿಲ್ ಅಪರೂಪದ ಸಾಧನೆಯನ್ನು ತಮ್ಮ ಹೆಸರಿನಲ್ಲಿ ದಾಖಲಿಸಿದ್ದಾರೆ. ಶುಭ್‌ಮನ್ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ನಂ.1 ರ‌್ಯಾಂಕ್ ತಲುಪಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡರು. ಗಿಲ್ ಈ ದಾಖಲೆಯನ್ನು ಕೇವಲ 41 ಇನ್ನಿಂಗ್ಸ್‌ಗಳಲ್ಲಿ ಸಾಧಿಸಿರುವುದು ಗಮನಾರ್ಹ.

ಈ ಅಪರೂಪದ ಸಾಧನೆ ಮಾಡಿದವರ ಪಟ್ಟಿಯಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇದ್ದಾರೆ. 2010ರಲ್ಲಿ ಏಕದಿನದಲ್ಲಿ ನಂ.1 ಬ್ಯಾಟ್ಸ್ ಮನ್ ಎನಿಸಿಕೊಂಡಿದ್ದ ಧೋನಿ ಕೇವಲ 38 ಇನ್ನಿಂಗ್ಸ್ ಗಳಲ್ಲಿ ಈ ಗೌರವ ಪಡೆದರು. ಅದೇ ರೀತಿ ಏಕದಿನದಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ನಾಲ್ಕನೇ ಆಟಗಾರ ಎಂಬ ಕೀರ್ತಿಗೆ ಗಿಲ್ ಪಾತ್ರರಾದರು. ಗಿಲ್‌ಗಿಂತ ಮೊದಲು ಸಚಿನ್ ತೆಂಡೂಲ್ಕರ್, ಧೋನಿ ಮತ್ತು ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ : ಕೇಳಿದ್ದು ಎಷ್ಟು ಕೋಟಿ, ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ..?

ಬೆಂಗಳೂರು: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 3,454 ಕೋಟಿ ಹಣ ಬಿಡುಗಡೆ

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

error: Content is protected !!