Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದೂ ಧರ್ಮದ ಸಂಸ್ಕೃತಿಗೆ ಧಕ್ಕೆ ತರುವ ಹೊಸ ವರ್ಷದ ಪಾರ್ಟಿಗಳಿಗೆ ಅನುಮತಿ ಬೇಡ : ವಿಶ್ವ ಹಿಂದೂ ಪರಿಷದ್ ಒತ್ತಾಯ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.29 : ಜಿಲ್ಲೆಯಲ್ಲಿ ಹೊಸ ವರ್ಷದ ಆಚರಣೆಯ ನೆಪದಲ್ಲಿ ಹಿಂದೂ ಧರ್ಮದ ಸಂಸ್ಕೃತಿಗೆ ಧಕ್ಕೆ ತರುವ ಪಾರ್ಟಿಗಳಿಗೆ ಅನುಮತಿಯನ್ನು ನೀಡಬಾರದೆಂದು ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದರು.

ನಗರದ ತುರುವನೂರು ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ಕಚೇರಿಗೆ ತರಳಿ ಎಸ್ ಪಿ ಯವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಡಿಸೆಂಬರ್ 31 ರ ರಾತ್ರಿ ಜಿಲ್ಲೆಯಲ್ಲಿ ಹೊಸ ವರ್ಷದ ಆಚರಣೆಯ ಹೆಸರಿನಲ್ಲಿ ಕೆಲವು ಹೋಟೆಲ್‍ಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಮಾದಕ ದ್ರವ್ಯಗಳು, ನೃತ್ಯ ಪಾರ್ಟಿಗಳು, ಡಿ.ಜೆ. ಪಾರ್ಟಿಗಳು ನಡೆಯುವ ಅವಕಾಶವಿದ್ದು, ಈ ರೀತಿಯ ಪಾರ್ಟಿಗಳಲ್ಲಿ ಯುವಕ ಯುವತಿಯರು ಭಾಗವಹಿಸಿ ಅಸಭ್ಯವಾಗಿ ವರ್ತಿಸಿ ಹಿಂದೂ ಸಂಸ್ಕೃತಿಗೆ ದಕ್ಕೆ ತರುವಂತಹ ಕೆಲಸ ನಡೆಯಬಹುದು.

ಇಂತಹ ಕಾರ್ಯಕ್ರಮಗಳಲ್ಲಿ ಯುವಕರು
ಮಧ್ಯಪಾನ, ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಕೂಗಾಡುವುದು, ಗಲಾಟೆ ಮಾಡುವುದು ತೊಂದರೆ ನೀಡುವಂತಹ ಘಟನೆಗಳು ನಡೆಯುತ್ತಿದೆ. ಮತ್ತು ಮಧ್ಯಪಾನ ಸೇವನೆಯಿಂದ ಅತೀ ವೇಗವಾಗಿ ವಾಹನ ಚಲಾವಣೆ ಮಾಡುವುದು, ವೀಲಿಂಗ್ ಮಾಡುವುದು ಹೀಗೆ ಸಾರ್ವಜನಿಕರಿಗೆ ತೊಂದರೆ ನೀಡುವಂತಹ ಸಂಭವ ಇರುತ್ತದೆ. ಈ ರೀತಿಯ ಸಂದರ್ಭದಲ್ಲಿ ಅಪಘಾತಗಳಾಗಿರುವ ಉದಾಹರಣೆಗಳಿವೆ.

ಹಿಂದೂ ಧರ್ಮದ ಸಂಸ್ಕøತಿಗೆ ಧಕ್ಕೆ ತರುವ ಇಂತಹ  ಯಾವುದೇ ರೀತಿಯ ಪಾರ್ಟಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡುವಂತಹ ಕಾರ್ಯಕ್ರಮಗಳಿಗೆ ಅನುಮತಿ ಕೊಡಬಾರದೆಂದು ವಿಶ್ವ ಹಿಂದೂ ಪರಿಷದ್ ನ ಜಿಲ್ಲಾ ಕಾರ್ಯದರ್ಶಿ ಪಿ.ರುದ್ರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪಿ.ರುದ್ರೇಶ್ ಜಿಲ್ಲಾ ಕಾರ್ಯದರ್ಶಿ ವಿಶ್ವ ಹಿಂದೂ ಪರಿಷದ್,  ಕೇಶವ್ ಜಿಲ್ಲಾ ಸಹ ಕಾರ್ಯದರ್ಶಿ ವಿಶ್ವ ಹಿಂದೂ ಪರಿಷದ್, ರಂಗನಾಥ್ ನಗರ ಸಹ ಕಾರ್ಯದರ್ಶಿ ವಿಶ್ವ ಹಿಂದೂ ಪರಿಷದ್. ಕಾರ್ಯಕರ್ತರಾದ ರೇಣುಸ್ವಾಮಿ, ಸುರೇಶ್, ತೇಜಸ್, ಗುರುರಾಜ್ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!