Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಾಜದಲ್ಲಿ ತೂಕವಿರುವ ವ್ಯಕ್ತಿ ಘನತೆಯಿಂದ ನಡೆದುಕೊಳ್ಳಬೇಕು : ಮತ್ತೆ ದರ್ಶನ್ ಬಗ್ಗೆ ಮಾತನಾಡಿದ ಉಮಾಪತಿ

Facebook
Twitter
Telegram
WhatsApp

ಬೆಂಗಳೂರು: ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿಯವರ ಮಾತಿನ ಸಮರ ಮತ್ತೆ ಮುಂದುವರೆದಿದೆ. ದರ್ಶನ್ ಅವರು ಸದ್ಯಕ್ಕೆ ಸೈಲೆಂಟ್ ಆಗಿದ್ದರು, ಉಮಾಪತಿಯವರು ಹೇಳಿಕೆಗಳನ್ನು ಮುಂದುವರೆಸಿದ್ದಾರೆ. ಇತ್ತಿಚೆಗಷ್ಟೇ ದರ್ಶನ್ ಅವರ ಡಿಪರ್ವ ಕಾರ್ಯಕ್ರಮ ಶ್ರೀರಂಗಪಟ್ಟಣದಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ದರ್ಶನ್, ಇಂದು ಇವಳಿರ್ತಾಳೆ, ನಾಳೆ ಅವಳಿರ್ತಾಳೆ.. ನಂಗೆ ನನ್ನನ್ನು ನಂಬಿ ಹಣ ಹಾಕಿದ ನಿರ್ಮಾಪಕರಷ್ಟೇ ಮುಖ್ಯ ಎಂದಿದ್ದರು. ಈ ಹೇಳಿಕೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು. ಜೊತೆಗೆ ಮಹಿಳೆಯರು ದರ್ಶನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದರು. ಈ ಬಗ್ಗೆ ನಿರ್ಮಾಪಕ ಉಮಾಪತಿ ಅವರು ಮಾತನಾಡಿದ್ದಾರೆ.

 

ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಬಂದ ಉಮಾಪತಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಟ ದರ್ಶನ್ ಅವರು ಹೆಣ್ಣು ಮಕ್ಕಳ ಬಗ್ಗೆ ಪದ ಬಳಕೆ ಮಾಡಿದ್ದು ತಪ್ಪು. ಮಹಿಳೆಯರಿಗೆ ತೊಂದರೆಯಾಗುವುದಂತೆ ಏನೋ ಮಾತನಾಡಿದ್ದಾರಂತೆ. ಹೀಗಾಗಿ ಪ್ರತಿಭಟನೆ ಮಾಡಿದ್ದಾರೆ. ಯಾಕೆ ಈ ವಿವಾದ ಆಯ್ತು ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲಾ ಹಿಟ್ಟೆ ತುಂಬಿದವರು. ನಾವೆಲ್ಲಾ ಹಸಿದವರು. ನಾವೆಲ್ಲಾ ಯಾವುದೋ ಮೂಲೆಯಲ್ಲಿ ಕೆಲಸ ಮಾಡಿಕೊಂಡು ಇದ್ದೇವೆ. ಎಲ್ಲರಿಗೂ ಸಮಸ್ಯೆಗಳು ಬರುತ್ತವೆ. ಆದರೆ ಅದನ್ನು ಹ್ಯಾಂಡಲ್ ಮಾಡುವ ರೀತಿ ಗೊತ್ತಿರಬೇಕು.

 

ಸಮಾಜದಲ್ಲಿ ತೂಕವಿರುವ ವ್ಯಕ್ತಿ ಘನತೆಯಿಂದ ನಡೆದುಕೊಳ್ಳಬೇಕು. ದೇಹ ತೂಕ ಇದ್ದರೆ ಸಾಲದು, ಮಾತು ಕೂಡ ತೂಕವಾಗಿರಬೇಕು. ತಪ್ಪು ನಾನು ಮಾಡಿದ್ರು ತಪ್ಪೇ, ಬೇರೆಉವರು ಮಾಡಿದರೂ ತಪ್ಪೇ. ನಾವೆಲ್ಲಾ ಸಿನಿಮಾ ಮುಖಾಂತರ ಮೆಸೇಜ್ ಕೊಡಬೇಕು. ಈ ರೀತಿ ಕಾಂಟ್ರವರ್ಸಿ ಮಾಡಿಕೊಂಡು ಮೆಸೇಜ್ ಕೊಡುವಂತದ್ದು ಏನು ಇಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!