Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಂಗನ ಕಾಯಿಲೆ ಲಕ್ಷಣವಿರುವ ವ್ಯಕ್ತಿ ಬಲಿ : ರಾಜ್ಯದಲ್ಲಿ ಔಷಧಿಯೂ ಇಲ್ಲ, ಆತಂಕವೂ ಹೆಚ್ಚಳ..!

---Advertisement---

ಚಿಕ್ಕಮಗಳೂರು: ಈಗಾಗಲೇ ರಾಜ್ಯದಲ್ಲಿ ಮಂಗನ ಕಾಯಿಲೆ ಸಾಕಷ್ಟು ಆತಂಕ ಸೃಷ್ಟಿಸಿದೆ. ಇದೀಗ ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಕಂಡು ಬಂದ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ರಾಜ್ಯದಲ್ಲಿ ಇದೇ ಮೊದಲ ಬಲಿಯಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಚಿಕ್ಕಮಗಳೂರಿನ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವ್ಯಕ್ತಿ ಬಲಿಯಾಗಿದ್ದಾನೆ. ಮೃತ ವ್ಯಕ್ತಿಗೆ ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಕಾಡುತ್ತಿತ್ತು. ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದು, ಮೃತ ವ್ಯಕ್ತಿಯ ದೇಹವನ್ನು ಪರೀಕ್ಷೆ ಮಾಡಿದಾಗ, ಕೆಎಫ್ಡಿ ಪತ್ತೆಯಾಗಿದೆ. ಇದು ಮಲೆನಾಡ ಭಾಗದ ಜನರಲ್ಲಿ ಭಯದ ವಾತಾವರಣವನ್ನುಂಟು ಮಾಡಿದೆ.

ಮಂಗನ ಕಾಯಿಲೆ ಅಷ್ಟಾಗಿ ಏನು ಕಾಡುತ್ತಾ ಇರಲಿಲ್ಲ. ಹೀಗಾಗಿ ಇದಕ್ಕೆ ಪ್ರತ್ಯೇಕ ಔಷಧಿಯನ್ನು ಕೂಡ ಇನ್ನು ಹೊರ ತಂದಿಲ್ಲ. ಈಗ ರಾಜ್ಯದೆಲ್ಲೆಡೆ ಮಂಗನ ಕಾಯಿಲೆ ಕಾಣಿಸಿಕೊಳ್ಳುವುದಕ್ಕೆ ಶುರು ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಾಕಷ್ಟು‌ ಜನರಿಗೆ ಮಂಗನ ಕಾಯಿಲೆ ವೈರಸ್ ಕಾಣಿಸಿಕೊಂಡಿದೆ. ಇದರ ಜೊತೆಗೆ ಮಕ್ಕಳಿಗೆ ಮಂಗನ ಬಾಹು ಹೆಚ್ಚಿನ ನೋವನ್ನು ನೀಡುತ್ತಿದೆ. ಈಗ ಸರ್ಕಾರದ ಮುಂದೆ ಈ ಕಾಯಿಲೆ ಹರಡದಂತೆ, ಯಾವುದೇ ಪ್ರಾಣಾಪಾಯವಾಗದಂತೆ ನೋಡಿಕೊಳ್ಳುವ ಸವಾಲು ಇದೆ. ಈಗಾಗಲೇ ಸರ್ಕಾರ ಕೂಡ ಮುನ್ನಚ್ಚರಿಕಾ ಕ್ರಮವನ್ನು ವಹಿಸುತ್ತಿದೆ. ಜನ ಕೂಡ ಈ ಕಾಯಿಲೆ ಉಲ್ಬಣವಾಗದಂತೆ ನೋಡಿಕೊಳ್ಳಲು ಹುಷಾರಾಗಿ ಇರಬೇಕಾಗಿದೆ, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಉತ್ತಮ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment