Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ MLC ಶಿವಮೊಗ್ಗದ ಡಾ.ಸರ್ಜಿ ಹೆಸರಲ್ಲಿ ವಿಷಯುಕ್ತ ಸ್ವೀಟ್ ಬಾಕ್ಸ್ ಪಾರ್ಸೆಲ್..!

---Advertisement---

ಶಿವಮೊಗ್ಗ: ಹೊಸ ವರ್ಷದ ಸಂಭ್ರಮದಲ್ಲಿ ನಾಡಿನ ಜನ ಇರುವಾಗ ಕಿಡಿಗೇಡಿಗಳು ವೈದ್ಯರನ್ನ ಟಾರ್ಗೆಟ್ ಮಾಡಿದ್ದಾರೆ. ಬಿಜೆಪಿ ಲೀಡರ್ ಹೆಸರಿನಲ್ಲಿ ವಿಷಯುಕ್ತ ಸ್ವೀಟ್ ಬಾಕ್ಸ್ ಅನ್ನ ಕಳುಹಿಸಿಕೊಟ್ಟಿದ್ದಾರೆ. ಒಂದು ವೇಳೆ ಆ‌ ಮೂವರು ಆ ಸ್ವೀಟ್ ಅನ್ನ ತಿಂದಿದ್ದರೆ ಇವತ್ತು ಅವರ ಕಥೆ ಅಷ್ಟೇ. ಈ ಘಟನೆ ನಡೆದಿರೋದು ಶಿವಮೊಗ್ಗದಲ್ಲಿ. ಬಿಜೆಪಿ ಪಕ್ಷದ ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಶಿವಮೊಗ್ಗದ ಮೂವರಿಗೆ ಸ್ವೀಟ್ ಬಾಕ್ಸ್ ವಿತರಿಸಲಾಗಿದೆ. ಕೊರಿಯರ್ ಮೂಲಕ ಸ್ವೀಟ್ ಬಾಕ್ಸ್ ನೀಡಲಾಗಿದೆ.

ಶಿವಮೊಗ್ಗದ ಪ್ರತಿಷ್ಠಿತ ಎನ್ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ಡಾಕ್ಟರ್ ಅರವಿಂದ್ ಹಾಗೂ ಡಾಕ್ಟರ್ ಪವಿತ್ರಾ ಅವರಿಗೆ ಸ್ವೀಟ್ ಬಾಕ್ಸ್ ನೀಡಲಾಗಿದೆ. ಸ್ವೀಟ್ ಬಾಕ್ಸ್ ಮೇಲೆ ಎಂಎಲ್ಸಿ ಹೆಸರು, ಭಾವಚಿತ್ರವನ್ನು ಅಂಟಿಸಲಾಗಿದೆ. ನಕಲಿ ಪತ್ರವನ್ನು ಇಟ್ಟು ಕಳುಹಿಸಲಾಗಿದೆ‌. ಎನ್ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್ ಅವರು ಈ ಸ್ವೀಟ್ ತಿಂದಾಗ ಕಹಿಯ ಅನುಭವವಾಗಿದೆ. ತಕ್ಷಣ ಡಿಎಸ್ ಅರುಣ್ ಅವರ ಗಮನಕ್ಕೆ ತಂದಿದ್ದಾರೆ. ಆ ಸಮಯದಲ್ಲಿಯೇ ಇನ್ನಿಬ್ಬರು ವೈದ್ಯರಿಗೂ ಸ್ವೀಟ್ ಬಾಕ್ಸ್ ರವಾನೆಯಾಗಿರುವುದು ತಿಳಿದು ಬಂದಿದೆ. ಸದ್ಯಕ್ಕೆ ಆ ಸ್ವೀಟನ್ನ ಯಾರೂ ತಿಂದಿಲ್ಲ.

ಇನ್ನು ಈ ಸ್ವೀಟನ್ನ ಪರೀಕ್ಷೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸ್ವೀಟ್ ಗೆ ಯಾವ ರೀತಿಯ ವಿಷ ಬೆರೆಸಲಾಗಿದೆ ಎಂಬುದರ ವರದಿಗಾಗಿ ಕಾಯುತ್ತಿದ್ದಾರೆ. ವರದಿ ಬಂದ ಬಳಿಕವಷ್ಟೇ ಸ್ವೀಟ್ ಗೆ ಏನು ಬೆರೆಸಿದ್ದಾರೆ ಎಂಬುದು ತಿಳಿಯಬೇಕಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸಿ ಈ ಕೆಲಸ ಮಾಡಿರುವುದು ಯಾರೆಂದು ತಿಳಿದು, ಕಠಿಣ ಶಿಕ್ಷೆ ಕೊಡಿಸಬೇಕೆಂದು ಧನಂಜಯ ಸರ್ಜಿ ಅವರೇ ಆಗ್ರಹಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment