ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ..!

suddionenews
0 Min Read

ಪೊಲೀಸ್ ಪೇದೆಯೊಬ್ಬರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ನವೀನ್ ಎಂಬ ಪೊಲೀಸ್ ಪೇದೆ, ಚಾಕುವಿನಿಂದ ಕೈ ಕುಯ್ದುಕೊಳ್ಳಲು ಯತ್ನಿಸಿದ್ದಾರೆ. ಆದರೆ ಆತ್ಮಹತ್ಯೆಗೆ ಇನ್ನು ನಿಖರ ಕಾರಣ ತಿಳಿದುಬಂದಿಲ್ಲ. ಗೃಹ ಸಚಿವರ ಭದ್ರತೆಗಾಗಿ ಪೇದೆ ನವೀನ್ ಅವರನ್ನು ನೇಮಕ ಮಾಡಲಾಗಿತ್ತು. ಆದರೆ ಇದೀಗ ಅವರೇ ಆತ್ಮಹತ್ಯೆಗೆ ಯತ್ನಿಸಿರುವುದು, ಶಾಕ್ ಆಗಿದೆ.

ಇಂದು ಮಧ್ಯಾಹ್ನದ ವೇಳೆಗೆ ಈ ಘಟನೆ ನಡೆದಿದೆ. ಪೇದೆ ನವೀನ್ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಗ ಅಲ್ಲಿಯೇ ಇದ್ದ ಸಿಬ್ಬಂದಿ ಅವರನ್ನು ಕಾಪಾಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಚಿಕಿತ್ಸೆ ಕೊಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *