ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಫೆ.02) : ಸುವರ್ಣ ಕ್ರಿಕೆಟ್ ಕ್ಲಬ್ ಚಿತ್ರದುರ್ಗ ವತಿಯಿಂದ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ದಿವಂಗತ ಎ.ರಾಜಗೋಪಾಲಚಾರ್ ಜ್ಞಾಪಕಾರ್ಥವಾಗಿ ಗುರುವಾರದಿಂದ ಅರಂಭಗೊಂಡಿರುವ ಎ.ರಾಜಗೋಪಾಲಚಾರ್ ಮೆಮೋರಿಯಲ್ ಕಪ್ ಲೀಗ್ ಕಮ್ ನಾಕೌಟ್ ಪಂದ್ಯಾವಳಿಯನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಬ್ಯಾಟ್ ಮಾಡುವ ಮೂಲಕ ಉದ್ಘಾಟಿಸಿದರು.
ಪಂದ್ಯ ಉದ್ಘಾಟಿಸಿ ಮಾತನಾಡಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಪ್ರಥಮ ಬಾರಿಗೆ ಎ.ರಾಜಗೋಪಾಲಚಾರ್ ಜ್ಞಾನಪಕಾರ್ಥವಾಗಿ ಕ್ರಿಕೆಟ್ ಪಂದ್ಯಾವಳಿ ನಡೆಸುತ್ತಿರುವುದು ಅತ್ಯಂತ ಸಂತೋಷದ ಸಂಗತಿ. ಯಾವುದೇ ಕ್ರೀಡೆಯನ್ನಾಗಲಿ ಸೋಲು-ಗೆಲುವು ಎನ್ನುವುದಕ್ಕಿಂತ ಮಿಗಿಲಾಗಿ ಕ್ರೀಡಾ ಮನೋಭಾವದಿಂದ ಆಡಬೇಕು ಎಂದು ಕ್ರೀಡಾಪಟುಗಳಿಗೆ ತಿಳಿಸಿದರು.
ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವೀರೇಶ್, ಎ.ರಾಜಗೋಪಾಲಚಾರ್ರವರ ಪುತ್ರ ಆರ್.ಮಂಜುನಾಥ್, ಸುವರ್ಣ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಎಂ.ಶಂಕರಮೂರ್ತಿ, ಉಪಾಧ್ಯಕ್ಷ ಟಿ.ನಟರಾಜ್, ರಾಘವೇಂದ್ರ, ವಿಜಯಕುಮಾರ್, ಚಿದಾನಂದ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್