Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀ ತಿಪ್ಪೇರುದ್ರಸ್ವಾಮಿ ದೇವಾಲಯದ ಹುಂಡಿಯಲ್ಲಿ ದಾಖಲೆ ಪ್ರಮಾಣದ ಹಣ ಸಂಗ್ರಹ ..!

Facebook
Twitter
Telegram
WhatsApp

ನಾಯಕನಹಟ್ಟಿ : ಶ್ರೀ ತಿಪ್ಪೇರುದ್ರಸ್ವಾಮಿ ದೇವಾಲಯದ ಹುಂಡಿಗಳಲ್ಲಿ 67.6 ಲಕ್ಷ ರೂಗಳ ದಾಖಲೆ ಪ್ರಮಾಣದ ಹಣ ಸಂಗ್ರಹವಾಗಿದೆ.

ಒಳಮಠದ ಹುಂಡಿಗಳಲ್ಲಿ 51,40,500 ರೂ, ಹೊರಮಠದ ಹುಂಡಿಗಳಲ್ಲಿ 16,24,583 ರೂಗಳು ಸೇರಿದಂತೆ ಒಟ್ಟು 67,65,583 ರೂ ಸಂಗ್ರಹವಾಗಿದೆ.

ಜಾತ್ರೆಯ ಸಂದರ್ಭದಲ್ಲಿ ಈ ಪ್ರಮಾಣದಲ್ಲಿ ಹಣ ಸಂಗ್ರಹವಾಗಿರುವುದು ಇದೇ ಮೊದಲಾಗಿದೆ. ಯಾವುದೇ ನಿರ್ಬಂಧಗಳಿಲ್ಲದೆ ಮಾ.20 ರಂದು ಜಾತ್ರೆ ಜರುಗಿತು. ಹೀಗಾಗಿ ಸುಮಾರು ಎರಡು ಲಕ್ಷ ಭಕ್ತರು ಜಾತ್ರೆಗೆ ಆಗಮಿಸಿದ್ದರು.

ಸಾಮಾನ್ಯವಾಗಿ ಹುಂಡಿ ಹಣ ಎಣಿಕೆ ಕಾರ್ಯ ಬೆಳಗ್ಗೆ ಆರಂಭವಾಗಿ ಸಂಜೆ ಮುಕ್ತಾಯವಾಗುತ್ತಿತ್ತು. ಆದರೆ ಈ ಬಾರಿಯ ಹುಂಡಿ ಹಣದ ಎಣಿಕೆ ಕಾರ್ಯ ಮುಕ್ತಾಯವಾದಾಗ ರಾತ್ರಿ 8 ಗಂಟೆಯಾಗಿತ್ತು. ಜಾತ್ರೆಗೆ ಮುಂಚೆ ಜ.28 ರಂದು ಹುಂಡಿ ಹಣವನ್ನು ಎಣಿಕೆ ಮಾಡಲಾಗಿತ್ತು. ಅಂದು 57.93 ಲಕ್ಷ ರೂಗಳಷ್ಟು ಹಣ ಸಂಗ್ರಹವಾಗಿತ್ತು. ಜಾತ್ರೆಯ ಮುಂಚೆ, ಜಾತ್ರೆಯ ನಂತರ ಹಾಗೂ ಶ್ರಾವಣ ಮಾಸದ ನಂತರ  ಹುಂಡಿ ಹಣವನ್ನು ವರ್ಷದಲ್ಲಿ ಮೂರು ಬಾರಿ ಎಣಿಸಲಾಗುವುದು. ಹಿಂದೂ ಧಾರ್ಮಿಕ ದತ್ತಿಯ ಇಲಾಖೆಯಲ್ಲಿ ಇಲ್ಲಿನ ದೇವಾಲಯವನ್ನು ಎ ಶ್ರೇಣಿಯ ದೇವಾಲಯ ಎಂದು ಪರಿಗಣಿಸಲಾಗಿದೆ.

ಹುಂಡಿ ಎಣಿಕಾ ಕಾರ್ಯವನ್ನು ಸಂಪೂರ್ಣವಾಗಿ ವೀಡಿಯೋ ಚಿತ್ರೀಕರಣಗೊಳಿಸಲಾಯಿತು.
ಕಂದಾಯ ಇಲಾಖೆ, ಕೆನರಾ ಬ್ಯಾಂಕ್, ದೇವಾಲಯ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ತಹಸೀಲ್ದಾರ್ ಎನ್.ರಘುಮೂರ್ತಿ, ದೇವಾಲಯದ ಇಒ. ಹೆಚ್. ಗಂಗಾಧರಪ್ಪ, ಪಿಎಸ್‍ಐ ಜೆ. ಶಿವರಾಜ್, ಕೆನರಾ ಬ್ಯಾಂಕ್ ಮ್ಯಾನೇಜರ್ ಸೂರ್ಯ ದೇವ ನಾಯ್ಕ, ರಾಜಸ್ವ ನಿರೀಕ್ಷಕ ಚೇತನ್, ಶಿರಸ್ತೇದಾರ್ ಸದಾಶಿವಪ್ಪ, ಸಿಬ್ಬಂದಿ ರೇಖಾ, ದೇವಾಲಯದ ಸಿಬ್ಬಂದಿ ಸತೀಶ್ ಮತ್ತಿತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!