Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೆಲಮಂಗಲ – ಯಶವಂತಪುರ ರಸ್ತೆಗೆ ಲೀಲಾವತಿ ಹೆಸರಿಡಲು ಮನವಿ

Facebook
Twitter
Telegram
WhatsApp

 

ಬೆಂಗಳೂರು: ಹಿರಿಯ ನಟಿ ಲೀಲಾವತಿ ಇಹಲೋಕ ತ್ಯಜಿಸಿ ಇಂದಿಗೆ ನಾಲ್ಕು ದಿನ. ಬಹುಭಾಷಾ ನಟಿಯನ್ನು ಕಳೆದುಕೊಂಡು ಗಣ್ಯರೆಲ್ಲ ಕಂಬನಿ ಮಿಡಿದಿದ್ದಾರೆ. ಅವರ ಅಗಾಧ ಪ್ರತಿಭೆ, ಮಾನವೀಯತೆ, ಸಮಾಜ ಸೇವೆ ನೆನೆದು ಕಣ್ಣೀರು ಹಾಕಿದ್ದಾರೆ. ಲೀಲಾವತಿ ಅಮ್ಮನವರು ಸಮಾಜಸೇವೆಗೆ ತಮ್ಮ ಜೀವನ ಮುಡಿಪಾಗಿಟ್ಟಿದ್ದವರು. ಪ್ರಾಣಿಗಳು ಎಂದರೆ ಪ್ರಾಣ ಬಿಡುತ್ತಾ ಇದ್ದರು. ಅದಕ್ಕೆ ಅವರ ಕೊನೆಯ ಆಸೆ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟನೆ ಮಾಡಿ, ಬಳಿಕ ನಿಧನರಾದರು.

ಇಂಥ ಅದ್ಬುತ ಕಲಾವಿದೆ, ಮಾನವೀಯತೆಯ ಮಮತೆಯ ತಾಯಿಯ ಹೆಸರನ್ನು ರಸ್ತೆಗೆ ಇಡಲು ಮನವಿ ಮಾಡಲಾಗಿದೆ. ಬಿಬಿಎಂಪಿ ನೌಕರರ ಸಂಘದವರಿಂದ ಈ ಮನವಿ ಮಾಡಲಾಗಿದ್ದು, ನೆಲಮಂಗಲದಿಂದ ಯಶವಂತಪುರದ ರಸ್ತೆಗೆ ಲೀಲಾವತಿ ಅವರ ಹೆಸರಿಡಲು ಪಾಲಿಕೆ ಆಯುಕ್ತರಿಗೆ ಪತ್ರ ಬರೆಯಲಾಗಿದೆ.

ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಪತ್ರ ಬರೆದಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆಗಳಿಗೆ ಹಲವು ಗಣ್ಯರ ಹೆಸರಿಡಲಾಗಿದೆ. ಕನ್ನಡ ಪರ ಹೋರಾಟಗಾರರು, ಸ್ವಾತಂತ್ರ್ಯ ಹೋರಾಟಗಾರು, ಹಿರಿಯ ನಟರು ಸೇರಿ ಹಲವು ಗಣ್ಯರ ಹೆಸರಿಡಲಾಗಿದೆ. ಅದರಂತೆಯೇ ದಿವಂಗತ ಲೀಲಾವತಿ ಅವರು ಸಾಕಷ್ಟು ಸಮಾಜಸೇವೆ ಮಾಡಿದ್ದಾರೆ. 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

error: Content is protected !!