Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕಾಲುವೆಯಲ್ಲಿ ತುಂಬಿರುವ ಹೂಳು ತೆಗೆಸುವಂತೆ ನಗರಸಭೆಗೆ ಮನವಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.,21) :  ನಗರದ ಜೋಗಿಮಟ್ಟಿ ರಸ್ತೆ ನಾಲ್ಕನೆ ಕ್ರಾಸ್‍ನಲ್ಲಿರುವ ರಾಜಕಾಲುವೆಯಲ್ಲಿ ಸುಮಾರು ವರ್ಷಗಳಿಂದಲೂ ಹೂಳು ತುಂಬಿದ್ದು, ಶೌಚಾಲಯಗಳು, ಯು.ಜಿ.ಡಿ. ಪೈಪ್‍ಲೈನ್ ತುಂಬಿ ರಾಜಕಾಲುವೆಯಲ್ಲಿ ಹರಿಯುತ್ತಿದೆ. ಕೂಡಲೆ ಹೂಳುತೆಗೆಸಿ ಚರಂಡಿ ದುರಸ್ಥಿಗೊಳಿಸುವಂತೆ ಸ್ಲಂ ಜನಾಂದೋಲನ-ಕರ್ನಾಟಕ ವತಿಯಿಂದ ಶುಕ್ರವಾರ ನಗರಸಭೆ ಮ್ಯಾನೇಜರ್‍ಗೆ ಮನವಿ ಸಲ್ಲಿಸಲಾಯಿತು.

ಮಾಳಪ್ಪನಹಟ್ಟಿ ಲೇಔಟ್‍ನ ಆಶ್ರಯ ಬಡಾವಣೆ ಎರಡನೆ ಹಂತದ ಎರಡನೆ ಬೀದಿಯಲ್ಲಿ ಚರಂಡಿ ಬ್ಲಾಕ್ ಆಗಿದ್ದು, ನೀರು ಸರಾಗವಾಗಿ ಹರಿಯದೆ ಸೊಳ್ಳೆಗಳ ತಾಣವಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿವೆ. ಸಫಾಯಿ ಕರ್ಮಚಾರಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಫೋಟೋ, ವೀಡಿಯೋ ಕ್ಲಿಪ್‍ಗಳನ್ನು ತೋರಿಸಿ ರಾಜಕಾಲುವೆಯಲ್ಲಿ ಹೂಳು ತೆಗೆಸಿ ಚರಂಡಿಯನ್ನು ದುರಸ್ಥಿಗೊಳಿಸುವಂತೆ ಒತ್ತಾಯಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಲಂ ಜನಾಂದೋಲನ-ಕರ್ನಾಟಕ ಜಿಲ್ಲಾ ಶಾಖೆಯವರು ಆಪಾದಿಸಿದರು.

ಮೈಲಮ್ಮ ದೇವಸ್ಥಾನದ ಪಕ್ಕದ ಸಂದಿಯಲ್ಲಿ 2 ಬೀದಿ ದೀಪ ಕೆಟ್ಟು ಹೋಗಿರುವುದನ್ನು ಸರಿಪಡಿಸಬೇಕು. ತಕ್ಷಣವೇ ನಗರಸಭೆ ಕಾರ್ಯಮಗ್ನವಾಗದಿದ್ದರೆ ಮುಂದಿನ ದಿನಗಳಲ್ಲಿ ನಗರಸಭೆ ಎದುರು ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

ಸ್ಲಂ ಜನಾಂದೋಲನ-ಕರ್ನಾಟಕ ಜಿಲ್ಲಾ ಶಾಖೆ ಸಂಚಾಲಕ ಮಂಜಣ್ಣ ಟಿ. ಜಿಲ್ಲಾಧ್ಯಕ್ಷ ಎಂ.ಮಹೇಶ್, ಉಪಾಧ್ಯಕ್ಷೆ ಶ್ರೀಮತಿ ಮಾಲತಿ, ಕಾರ್ಯದರ್ಶಿ ಭಾಗ್ಯಮ್ಮ, ಸಹ ಕಾರ್ಯದರ್ಶಿ ವರಲಕ್ಷ್ಮಿ, ಖಜಾಂಚಿ ಮಂಜುನಾಥ, ರಾಜ್ಯ ಸಮಿತಿ ಸದಸ್ಯೆ ಮಂಜಕ್ಕ, ಸಲ್ಮ, ಡಿ.ಎಸ್.ಎಸ್.ನ ರುದ್ರಮುನಿ ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚು ನೀರು ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ : ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ವೈದ್ಯರು ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲು ಹೇಳುತ್ತಾರೆ. ಹೆಚ್ಚು ನೀರು ಇರುವ ಹಣ್ಣುಗಳು ಮತ್ತು ಆಹಾರಗಳನ್ನು

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ, ಬುಧವಾರ ರಾಶಿ ಭವಿಷ್ಯ -ಮೇ-1,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

error: Content is protected !!