Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿಜೆಪಿಯಲ್ಲೂ ಶುರುವಾಯ್ತು ಕ್ರಾಂತಿ : ದೆಹಲಿಯಲ್ಲಿ ವಿಜಯೇಂದ್ರ ವಿರುದ್ಧ ನಡಿತಿರೋದೇನು..?

---Advertisement---

ಬೆಂಗಳೂರು: ಕಾಂಗ್ರೆಸ್ ನಲ್ಲಿ ಕುರ್ಚಿ ಕದನ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿತ್ತು. ಈಗ ಕಾಂಗ್ರೆಸ್ ನಲ್ಲಿ ಬದಲಾವಣೆಯ ಬಿರುಗಾಳಿ ತಣ್ಣಗಾವಿದ್ರೆ, ಆ ಕಡೆ ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನದ ಬದಲಾವಣೆಯ ಸದ್ದು ಕೂಡ ಜೋರಾಗಿದೆ. ಕಳೆದ ಕೆಲವು ತಿಂಗಳಿನಿಂದ ಬಿಜೆಪಿಯಲ್ಲೂ ರೆಬೆಲ್ ತಂಡ ಒಂದಾಗಿದೆ. ಅದರಲ್ಲೂ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಒತ್ತಡಗಳು ಕೇಳಿ ಬರುತ್ತಿವೆ. ಇದೀಗ ಇದರ ನಡುವೆ ರೆಬೆಲ್ ಟೀಂ ದೆಹಲಿಗೆ ಪ್ರಯಾಣ ಬೆಳೆಸಿದೆ.

ದೆಹಲಿಗೆ ಭೇಟಿ ಕೊಟ್ಟಿರುವ ರೆಬೆಲ್ಸ್ ಟೀಂ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರನ್ನು ಭೇಟಿ ಮಾಡಿದ್ದಾರೆ. ಕಳೆದ ಮೂರು ದಿನಗಳ ಹಿಂದಷ್ಟೇ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ರೆಬೆಲ್ಸ್ ತಂಡ ದೆಹಲಿಗೆ ತೆರಳಿತ್ತು. ಬಿವೈ ವಿಜಯೇಂದ್ರ ವಿರುದ್ಧ ಸೆಡ್ಡು ಹೊಡೆದಿರುವ ಟೀಂ, ಕೇಂದ್ರ ಸಚಿವ ಕುಮಾರಸ್ವಾಮಿ, ಸಚಿವ ಸೋಮಣ್ಣ, ಬಸವರಾಜ್ ಬೊಮ್ಮಾಯಿ, ಡಾ.ಸುಧಾಕರ್ ಸೇರಿ ಹಲವರನ್ನು ಭೇಟಿ ಮಾಡಿದ್ದಾರೆ.

ರಾಜ್ಯದಲ್ಲಿ ಸಮರ್ಪಕವಾಗಿ ಹೋರಾಟ ಮಾಡ್ತಿಲ್ಲ. ಸರ್ಕಾರದ ವಿರುದ್ಧ ಪ್ರಸಕ್ತ ವಿದ್ಯಮಾನಗಳ ಬಗ್ಗೆ ತಲೆಕೆಡಿಸಿಕೊಳ್ತಿಲ್ಲ. ಹೋರಾಟದ ರೂಪುರೇಷೆ ರಚಿಸುವಲ್ಲಿ ಸಂಘಟನಾತ್ಮಕವಾಗಿ ವಿಫಲರಾಗಿದ್ದಾರೆ ಎಂಬೆಲ್ಲಾ ವಿಚಾರಗಳ ಮೇಲೆ ರೆಬೆಲ್ಸ್ ಟೀಂ ದೂರು ನೀಡಿದೆ. ಇಷ್ಟೆಲ್ಲಾ ಪುತ್ರನ ವಿರುದ್ಧ ಮಸಲತ್ತು ನಡೆಯುತ್ತಿರುವಾಗ ಯಡಿಯೂರಪ್ಪ ಅವರು ಸುಮ್ಮನೆ ಕೂರುವುದುಂಟಾ..? ಈಗ ದೆಹಲಿಗೆ ಹಾರಿದ್ದು, ಹೈಕಮಾಂಡ್ ನಾಯಕರ ಜೊತೆಗೆ ಪುತ್ರ ಪರ ಮಾತನಾಡುವ ಸಾಧ್ಯತೆ ಇದೆ. ಹೈಕಮಾಂಡ್ ನಾಯಕರು ಸಹ ರೆಬೆಲ್ಸ್ ಟೀಂ ಮಾತು ಕೇಲಕ್ತಾರಾ..? ಯಡಿಯೂರಪ್ಪ ಅವರ ಮಾತು ಕೇಳ್ತಾರಾ ನೋಡಬೇಕಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now