Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಮಾಡಿದ ಆರೋಪಿ ಹುಡುಕಿ ಕೊಟ್ಟವರಿಗೆ 10 ಲಕ್ಷ ಬಹುಮಾನ ಘೋಷಣೆ..!

Facebook
Twitter
Telegram
WhatsApp

 

 

ಬೆಂಗಳೂರು: ಇಂದಿರಾನಗರದಲ್ಲಿರುವ ರಾಮೇಶ್ವರಂ ಸ್ಪೋಟ ಪ್ರಕರಣ ನಡೆದು ಆರು ದಿನಗಳು ಕಳೆದಿವೆ. ಆದರೂ ಆರೋಪಿ ಮಾತ್ರ ಪೊಲೀಸರಿಗೆ ಸಿಕ್ಕಿಲ್ಲ. ಸಖತ್ ಪ್ಲ್ಯಾನ್ ಮಾಡಿಕೊಂಡೆ ಆತ ಬಾಂಬ್ ಬ್ಲಾಸ್ಟ್ ಮಾಡಿದ್ದಾನೆ. ಎಲ್ಲಿಯೂ ತನ್ನ ಕುರುಹು ಕೂಡ ಸಿಗದಂತೆ ಮಾಡಿದ್ದಾನೆ. ಕಳೆದ ಐದು ದಿನಗಳಿಂದ ಕರ್‌ಅಟಕ ಪೊಲೀಸರು ಬೆಂಬಿಡದೆ ಹುಡುಕುತ್ತಿದ್ದಾರೆ. ಆದರೂ ಸುಳಿವು ಸಿಗುತ್ತಿಲ್ಲ. ಈ ಕೇಸನ್ನು ಎನ್ಐಎ ತಂಡ ಕೈಗೆತ್ತಿಕೊಂಡಿದ್ದು, ಇದೀಗ ಆರೋಪಿಯ ಹುಡುಕಾಟಕ್ಕೆ ಹೊಸ ದಾರಿ ಹುಡುಕಿದೆ.

ಶಂಕಿತ ಓಡಾಡಿದ ಸಿಸಿಟಿವಿ ವಿಡಿಯೋ ಅದಾಗಲೇ ರಿಲೀಸ್ ಆಗಿತ್ತು. ಬಾಂಬ್ ಇಟ್ಟವ ಎಲ್ಲಿಯೂ ತನ್ನ ಮುಖ ಕಾಣದಂತೆ ಕವರ್ ಮಾಡಿಕೊಂಡಿದ್ದ. ಹೀಗಾಗಿ ಈಗ ರಾಷ್ಟ್ರೀಯ ತನಿಖಾ ಸಂಸ್ಥೆ ಆತನ ಹುಡುಕಿಕೊಟ್ಟವರಿಗೆ ಬಹುಮಾನ ಘೋಷಣೆ ಮಾಡಿದೆ. ಬರೋಬ್ಬರಿ ಹತ್ತು ಲಕ್ಷ ರೂಪಾಯಿ ಘೋಷಣೆ ಮಾಡಿದೆ. ಆರೋಪಿಯ ಸುಳಿವು ಕೊಟ್ಟವರಿಗೆ ಹತ್ತು ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದ್ದು, ಆತನ ಸುಳಿವು ಸಿಕ್ಕಲ್ಲಿ 080-29510900 ಮತ್ತು 8904241100 ನಂಬರಿಗೆ ಮಾಹಿತಿ ನೀಡಲು ಸೂಚನೆ ನೀಡಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಮೇಶ್ವರಂ ಕೆಫೆಯಲ್ಲಿ ಯಾವಾಗಲೂ ಸಿಕ್ಕಾಪಟ್ಟೆ ಜನ ಇರುತ್ತಾರೆ. ಅಲ್ಲಿನ ತಿಂಡಿ, ಊಟಕ್ಕೆ ಜನ ಮನಸೋತಿದ್ದಾರೆ. ಹೀಗಾಗಿ ಸದಾ ಜನಜಂಗುಳಿಯಿಂದ ಕೂಡಿರುತ್ತದೆ. ಜನ ಹೆಚ್ಚಾಗಿರುವ ಜಾಗವನ್ನೇ ನೋಡಿ ಬ್ಲಾಸ್ಟ್ ಮಾಡಲಾಗಿದೆ. ಹೊಟೇಲ್ ಬೆಳೆದ ರೀತಿಗೆ, ಆ ಯಶಸ್ಸಿಗೆ ಯಾರಾದರೂ ಈ ರೀತಿ ಮಾಡಿದರಾ, ಅಥವಾ ಜನರು ಹೆಚ್ಚಾಗಿದ್ದ ಕಾರಣ ಬ್ಲಾಸ್ಟ್ ಮಾಡಿದರಾ ಯಾವ ಮಾಹಿತಿಯೂ ಇನ್ನು ಪಕ್ಕಾ ಆಗಿಲ್ಲ. ಆರೋಪಿ ಸಿಕ್ಕ ಬಳಿಕವಷ್ಟೇ ಇದಕ್ಕೆಲ್ಲಾ ಒಂದು ಅಂತ್ಯ ಸಿಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!