Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪೌರ ಕಾರ್ಮಿಕರಿಗೊಂದು ಸಲಾಂ : ಕೆಲವೇ ಗಂಟೆಗಳಲ್ಲಿ ಸ್ವಚ್ಛವಾದ ನಗರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ. 14 : ನಗರದಲ್ಲಿ ನಿನ್ನೆ ಹಿಂದೂ ಮಹಾ ಗಣಪತಿಯ ಶೋಭಾಯಾತ್ರೆ ವಿಜೃಂಭಣೆಯಿಂದ ನಡೆದಿದ್ದು ಇದರಲ್ಲಿ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮೆರವಣಿಗೆಯನ್ನು ನಡೆಸಿ ಹಿಂದೂ ಮಹಾ ಗಣಪತಿಯನ್ನು ಚಂದ್ರವಳ್ಳಿ ನಿರ್ಮಿಸಲಾದ ಭಾವಿಯಲ್ಲಿ ವಿಸರ್ಜನೆ ಮಾಡಲಾಯಿತು.

ಈ ಶೋಭಾಯಾತ್ರೆ ಸಂದರ್ಭದಲ್ಲಿ ಭಕ್ತಾಧಿಗಳು ಅಭಿಮಾನಿಗಳು ಆಗಮಿಸಿದ್ದರು. ನಗರದ ಮುಖ್ಯ ರಸ್ತೆಯಲ್ಲಿ ಭಕ್ತರಿಗೆ ಪ್ರಸಾದ, ಮಜ್ಜಿಗೆ ನೀರು ವಿತರಿಸಲಾಗಿತ್ತು. ಅಲ್ಲದೇ ಐಸ್ ಕ್ರೀಂ, ನೀರಿನ ಬಾಟಲಿಗಳು ಸೇರಿದಂತೆ ವಿವುಧ ಬಗೆಯ ತಿಂಡಿ ತಿನಿಸುಗಳು ಮಾರಾಟವಾಗಿದ್ದವು. ಇವೆಲ್ಲವುಗಳ ತ್ಯಾಜ್ಯದ ಜೊತೆಗೆ ಚಪ್ಪಲಿ, ಬೂಟುಗಳಂತಹ ಇತರೆ ತ್ಯಾಜ್ಯಗಳು ರಸ್ತೆ ತುಂಬಾ ಚಲ್ಲಾಪಿಲ್ಲಿಯಾಗಿದ್ದವು. ಅವರಿಂದ ಕಸದ ರಾಶಿ ನಗರದ ಬಿ.ಡಿ.ರಸ್ತೆಯಲ್ಲಿ ಹರಡಿತ್ತು. ಆ ಕಸವನ್ನು ನೋಡಿದರೆ. ಇಷ್ಟೊಂದು ಕಸವನ್ನು ಸ್ವಚ್ಚ ಮಾಡಲು ಎಷ್ಟು ದಿನ ಬೇಕಾಗುತ್ತದೋ ಎಂದು ಅನಿಸಿತ್ತು.

ಆದರೆ ಇಂದು ಬೆಳಗಿನ ಜಾವ ಸುಮಾರು 4 ಗಂಟೆಗೆ ರಸ್ತೆಗಿಳಿದ ನಗರಸಭೆಯ ಪೌರ ಕಾರ್ಮಿಕರು ನೌಕರರು ಸ್ವಚ್ಚ ಮಾಡುವ ಕಾರ್ಯವನ್ನು ಸುಮಾರು 5 ರಿಂದ 6 ಗಂಟೆಗಳ ಕಾಲ ಸ್ವಚ್ಚತಾ ಕಾರ್ಯವನ್ನು ಮಾಡಿ ಮುಗಿಸಿದರು.

ಇಂದು ನಡೆದ ಸ್ವಚ್ಚತಾ ಕಾರ್ಯದಲ್ಲಿ ನಗರಸಭೆಯ ಸಿಬ್ಬಂದಿಯ ಜೊತೆಗೆ ರಾಜ್ಯ ಬಿಜೆಪಿ ಎಸ್.ಸಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕಾರಜೋಳ, ಆದರ್ಶ, ವಿಶ್ವನಾಥ್, ಲೋಹಿತ್ ಸಿದ್ದೇಶ್ ರವರು ಕೈ ಜೋಡಿಸುವುದರ ಮೂಲಕ ಕಸದ ರಾಶಿಯನ್ನು ವಿಲೇವಾರಿ ಮಾಡಲು ಸಹಾಯವನ್ನು ಮಾಡಿದ್ದಾರೆ. ಜಿಲ್ಲಾ ಸಚಿವರು ಈ ಕಸದ ರಾಶಿಯನ್ನು ತೆಗೆಯಲು ಸುಮಾರು 10 ರಿಂದ 15 ದಿನಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಹೇಳಿದ್ದರು. ಆದರೆ ನಮ್ಮ ಪೌರ ಕಾರ್ಮಿಕರು ಕೇವಲ 5 ರಿಂದ 6 ಗಂಟೆಯ ಒಳಗೆ ಪೂರ್ಣವಾಗಿ ಸ್ವಚ್ಚ ಮಾಡಿದ್ದಾರೆ ಎಂದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...