Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿಲ್ಲೆಯಾದ್ಯಂತ ಅನುರಣಿಸಿದ ಕನ್ನಡಾಭಿಮಾನದ ಜಯಘೋಷ ಕೋಟೆನಾಡಲ್ಲಿ ಪ್ರತಿಧ್ವನಿಸಿದ “ಕೋಟಿ ಕಂಠ ಗೀತಗಾಯನ”

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಅಕ್ಟೋಬರ್28) : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು-ನುಡಿಯ ಹಿರಿಮೆ ಸಾರುವ ಕನ್ನಡ ಗೀತೆಗಳ “ಕೋಟಿ ಕಂಠ ಗಾಯನ” ಶುಕ್ರವಾರ ಜಿಲ್ಲೆಯಾದ್ಯಂತ 18 ಸ್ಥಳಗಳಲ್ಲಿ ಏಕಕಾಲದಲ್ಲಿ ಸಮೂಹ ಗೀತ ಗಾಯನ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನನ್ನ ಹಾಡು ನನ್ನ ಹಾಡು ಶೀರ್ಷಿಕೆಯಡಿ ಜಿಲ್ಲಾ ಕೇಂದ್ರ, ತಾಲ್ಲೂಕು  ಕೇಂದ್ರ, ಹೋಬಳಿ ಹಾಗೂ ಗ್ರಾಮಮಟ್ಟದಲ್ಲಿಯೂ ಕೋಟಿ ಕಂಠ ಗೀತ ಗಾಯನ ಅನುರಣಿಸಿತು.

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ, ಚಿತ್ರದುರ್ಗ ಕೋಟೆ ಮುಂಭಾಗ, ಚಿತ್ರದುರ್ಗದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು, ಎಸ್‍ಆರ್‍ಎಸ್ ಕಾಲೇಜು, ಎಸ್‍ಜೆಎಂಐಟಿ ಕಾಲೇಜು, ಅರವಿಂದ ಗಾರ್ಮೆಂಟ್ಸ್, ಸರ್ಕಾರಿ ವಿಜ್ಞಾನ ಕಾಲೇಜು, ಬಾಪೂಜಿ ವಿದ್ಯಾಸಂಸ್ಥೆ, ಹೊಸದುರ್ಗದ ಸರ್ಕಾರಿ ಪದವಿಪೂರ್ವ ಕಾಲೇಜು, ಎಸ್.ನಿಜಲಿಂಗಪ್ಪ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ, ಮೊಳಕಾಲ್ಮುರಿನ ಸರ್ಕಾರಿ ಪದವಿಪೂರ್ವ ಕಾಲೇಜು, ಹಿರಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು, ಹೊಳಲ್ಕೆರೆ ಸರ್ಕಾರಿ ಪದವಿಪೂರ್ವ ಕಾಲೇಜು, ಚಳ್ಳಕೆರೆ ಸರ್ಕಾರಿ ಪದವಿಪೂರ್ವ ಕಾಲೇಜು, ತಳಕು ಸರ್ಕಾರಿ ಪದವಿಪೂರ್ವ ಕಾಲೇಜು, ಚಿತ್ರದುರ್ಗ ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿ ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಸೇರಿದಂತೆ ಜಿಲ್ಲೆಯಾದ್ಯಂತ 18 ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು  ಸೇರಿದಂತೆ ಸಾಮೂಹಿಕವಾಗಿ ಬೆಳಿಗ್ಗೆ 11ಕ್ಕೆ ಏಕಕಾಲದಲ್ಲಿ ಕೋಟಿ ಕಂಠ ಗೀತಗಾಯನ ಮೊಳಗಿತು.

ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ನಾಡು-ನುಡಿಯ ಶ್ರೇಷ್ಟತೆ ಸಾರುವ ಆರು ಕನ್ನಡ ಗೀತೆಗಳ ಗಾಯನ ಮಾಡಲಾಯಿತು. ಮೊದಲಿಗೆ ನಾಡಗೀತೆ-ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ, ಹುಯಿಲಗೋಳ ನಾರಾಯಣರಾಯರ “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು”, ರಾಷ್ಟ್ರಕವಿ ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವ”, ಡಾ.ಡಿ.ಎಸ್.ಕರ್ಕಿಯವರ “ಹಚ್ಚೇವು ಕನ್ನಡದ ದೀಪ”, ನಾಡೋಜ ಡಾ.ಚೆನ್ನವೀರ ಕಣವಿಯವರ “ವಿಶ್ವವಿನೂತನ ವಿದ್ಯಾಚೇತನ” ಡಾ.ಹಂಸಲೇಖರವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಎಂಬ ನಾಡು-ನುಡಿಯ ಅಭಿಮಾನದ ಗೀತೆಗಳನ್ನು ಹಾಡಿ ಸಂಭ್ರಮಿಸಲಾಯಿತು.
ಏಳು ಸುತ್ತಿನ ಕೋಟೆಯಲ್ಲಿ ಮೊಳಗಿದ ಕನ್ನಡದ ಕಹಳೆ
ಕನ್ನಡ ಪರಂಪರೆ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರಿನಲ್ಲಿ KAS ಆಫೀಸರ್ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಬೆಂಗಳೂರು: ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾ ಬಿ.ಗೌಡ ಎಂಬುವವರು ಸಾವನ್ನಪ್ಪಿದ್ದಾರೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಚೈತ್ರಾಗೆ ಇನ್ನು 35 ವರ್ಷ ವಯಸ್ಸಾಗಿತ್ತಷ್ಟೆ. ಸಂಜಯ್ ನಗರ ಪೊಲೀಸ್ ಠಾಣಾ

ಟೀಂ ಇಂಡಿಯಾ ಕೋಚ್ ಹುದ್ದೆಗೆ ಮೂವರ ಹೆಸರು ರೇಸ್ ನಲ್ಲಿ : ದ್ರಾವಿಡ್ ಗೆ ಸಿಗಲ್ವಾ ಮತ್ತೆ ಹುದ್ದೆ..?

ಐಪಿಎಲ್ ಮುಗಿದ ಕೂಡಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅದಕ್ಕೆ ಉಳಿದಿರುವುದು ಇನ್ನು ಕೇವಲ 20 ದಿನಗಳಷ್ಟೇ. ಆದರೆ ಈ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಬಗ್ಗೆ ಚರ್ಚೆ ಶುರುವಾಗಿದೆ. ಈಗ ಇರುವ ಟೀಂ ಇಂಡಿಯಾದ

ರಾಜ್ಯದಲ್ಲಿ ಮುಂದಿನ 6 ದಿನ ಧಾರಾಕಾರ ಮಳೆ : ಹವಮಾನ ಇಲಾಖೆ ಮುನ್ಸೂಚನೆ

    ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಮಳೆ ಶಯರುವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಜೋರು ಮಳೆ ಬರುತ್ತಿದೆ. ಮುಂದಿನ 6 ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು

error: Content is protected !!