ಕಾಂಗ್ರೆಸ್ – ಬಿಜೆಪಿಯಿಂದ ಒಂದೇ ಯೋಜನೆ : ಯಾರ ಪರ ನಿಲ್ತಾರೆ ಗೃಹಲಕ್ಷ್ಮೀಯರು..?

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಜನರಿಗೆ ಹತ್ತಿರವಾಗುವುದಕ್ಕೆ ನೋಡುತ್ತವೆ. ಮಹಿಳೆಯರ ಮತಗಳನ್ನು ಸೆಳೆಯುವುದಕ್ಕೆ ನಿನ್ನೆ ಕಾಂಗ್ರೆಸ್ ಪಕ್ಷ ಮಹಿಳಾ ಮಣಿಯರಿಗಾಗಿ ನಾ ನಾಯಕಿ ಎಂಬ ಕಾರ್ಯಕ್ರಮ ಮಾಡಿ, ಅವರಿಗಾಗಿ ಒಂದಷ್ಟು ಘೋಷನೆಯನ್ನು ಮಾಡಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ಹಣವನ್ನು ನೀಡುವುದಾಗಿ ತಿಳಿಸಿತ್ತು. ಇದೀಗ ಬಿಜೆಪಿ ಕೂಡ ಇದೇ ರೀತಿಯ ಆಶ್ವಾಸನೆ ನೀಡುವ ಯೋಜನೆಯಲ್ಲಿದೆ. ಹೀಗಾಗಿ ಇಬ್ಬರಲ್ಲಿ ಈ ಯೋಜನೆಯನ್ನು ಕಾಪಿ ಮಾಡಿದವರು ಯಾರು ಎಂಬುದೇ ತಿಳಿಯುತ್ತಿಲ್ಲ. ಕಾಂಗ್ರೆಸ್ ಘೋಷಣೆ ಮಾಡುವುದಕ್ಕೂ ಮುನ್ನವೇ ಸಿಎಂ ಬೊಮ್ಮಾಯಿ ಅವರು ಘೋಷಣೆ ಮಾಡಿಯಾಗಿತ್ತು.

ಅರಮನೆ ಮೈದಾನದಲ್ಲಿ ನಾ ನಾಯಕಿ ಎಂಬ ಅದ್ಧೂರಿ ಕಾರ್ಯಕ್ರಮವನ್ನು ಮಾಡಿತ್ತು. ಅದಕ್ಕೆ ಪ್ರಿಯಾಂಕ ಗಾಂಧಿ ಆಗಮಿಸಿದ್ದರು. ಈ ವೇಳೆ ಮಹಿಳೆಯರಿಗೆ ಪ್ರತಿ ತಿಂಗಳು ಹಣ ನೀಡುವ ಬಗ್ಗೆ ಘೋಷಣೆ ಮಾಡಿ, ಮಹಿಳೆಯರ ಮತ ಸೆಳೆಯುವ ಪ್ರಯತ್ನವಂತು ನಡೆಯಿತು. ಇದೀಗ ಇದಕ್ಕೆ ಉತ್ತರವಾಗಿ ಬಿಜೆಪಿ ಕೂಡ ಈ ಬಾರಿಯ ಬಜೆಟ್ ನಲ್ಲಿ ಬಿಪಿಎಲ್ ಕುಟುಂಬದ ಮಹಿಳೆಯರಿಗೆ 2 ಸಾವಿರ ರೂಪಾಯಿ ನೀಡುವುದಾಗಿ ಘೋಷಣೆ ಮಾಡುವ ಪ್ಲ್ಯಾನ್ ನಲ್ಲಿದೆ ಎನ್ನಲಾಗಿದೆ.

ಇನ್ನು ಫೆಬ್ರವರಿ ಮೂರನೇ ವಾರದಲ್ಲಿಯೇ ಬಜೆಟ್ ಮಂಡನೆಯಾಗಲಿದೆ ಎನ್ನಲಾಗುತ್ತಿದೆ. ಬಜೆಟ್ ಮೂಲಕ ಮತದಾರರನ್ನು ಸೆಳೆಯುವ ಯತ್ನವಾಗಲಿದೆ ಎನ್ನಲಾಗುತ್ತಿದೆ. ಕುಟುಂಬದ ಅಗತ್ಯವನ್ನು ನೋಡಿಕೊಂಡು ಸಾವಿರ, ಒಂದೂವರೆ ಸಾವಿರ, ಎರಡು ಸಾವಿರ ಹೀಗೆ ಹಣ ನೀಡಲು ನಿರ್ಧರಿಸಿದೆ ಎನ್ನಲಾಗುತ್ತಿದೆ.

suddionenews

Recent Posts

ರತನ್ ಟಾಟಾ ಉಯಿಲ್ ನಲ್ಲಿ ಮೋಹಿನಿಗೆ 500 ಕೋಟಿ : ಹುಡುಕಾಟ ಶುರು..!

ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…

4 minutes ago

ಬಗರ್‍ಹುಕುಂ ಅರ್ಜಿಗಳನ್ನು ಮರು ಪರಿಶೀಲಿಸಿ : ಕುಮಾರ್ ಸಮತಳ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…

10 minutes ago

ಹೈಕೋರ್ಟ್ ತೀರ್ಪು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಭ್ರಮಾಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

14 minutes ago

ದಾವಣಗೆರೆ ವಿಶ್ವವಿದ್ಯಾನಿಲಯ : ಹೊಳಲ್ಕೆರೆ ವಿದ್ಯಾರ್ಥಿನಿ ಗಂಗಮ್ಮ ಪ್ರಥಮ ರ‌್ಯಾಂಕ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

17 minutes ago

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

24 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

36 minutes ago