Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಧಾರವಾಡಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿಗೆ ರೆಡಿಯಾಗಿದೆ ಸ್ಪೆಷಲ್ ಗಿಫ್ಟ್ : ಏನದರ ವಿಶೇಷತೆ ಗೊತ್ತಾ..?

Facebook
Twitter
Telegram
WhatsApp

 

 

ಹುಬ್ಬಳ್ಳಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಧಾನಿ ಮೋದಿ ಕರ್ನಾಟಕ ರಾಜ್ಯಕ್ಕೆ ಸಿಕ್ಕಾಪಟ್ಟೆ ಭೇಟಿ ನೀಡುತ್ತಿದ್ದಾರೆ. ಇದೀಗ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ನಾಳೆ ಹುಬ್ಬಳ್ಳಿ – ಧಾರವಾಡಕ್ಕೆ ಆಗಮಿಸುತ್ತಿದ್ದಾರೆ. ಅವರಿಗಾಗಿಯೇ ಸ್ಪೆಷಲ್ ಉಡುಗೊರೆಯೊಂದು ಸಿದ್ಧವಾಗಿದೆ.

ಐಐಟಿ.. ವಿಶ್ವದ ಅತಿ ಎತ್ತರದ ರೈಲ್ವೆ ಫ್ಲಾಟ್ ಫಾರಂ ಅನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರಿಗೆ ಹಲವು ಬಗೆಯ ಉಡುಗೊರೆ ನೀಡಲು ಸಿದ್ಧತೆ ನಡೆಸಲಾಗಿದೆ. ಆ ಉಡುಗೊರೆಯಲ್ಲಿ ವಿಶೇಷತೆಯೂ ಅಡಗಿದೆ. ಕಲಘಟಗಿಯ ತೊಟ್ಟಿಲು, ಹಾವೇರಿಯ ಯಾಲಕ್ಕಿ ಮಾಲೆ, ಸಿದ್ದರೂಢರ ಮೂರ್ತಿ, ಕಸೂತಿಯ ಶಾಲು ಸೇರಿದಂತೆ ಹಲವು ಉಡುಗೊರೆ ನೀಡಲಿದ್ದಾರೆ.

ನರೇಂದ್ರ ಮೋದಿಯವರಿಗೆ ನೀಡುತ್ತಿರುವ ತೊಟ್ಟಿಲು ತುಂಬಾ ವಿಶೇಷವಾದದ್ದಾಗಿದೆ. ಎರಡು – ಮೂರು ತಲೆಮಾರಿನಿಂದ ತೊಟ್ಟಿಲು ಮಾಡಿಕೊಂಡು ಬಂದಿರುವ ಬಡಿಗೇರ ವಂಶಸ್ಥರಿಂದ ಈ ತೊಟ್ಟಿಲು ತಯಾರಾಗಿದೆ. ತೊಟ್ಟಿಲಿನ ಸುತ್ತಲೂ ಕೃಷ್ಣನ ಬಾಲ್ಯದ ಚಿತ್ರಗಳು, ಅವನ ತುಂಟಾಟ ಹೀಗೆ ಹಲವು ರೀತಿಯ ಚಿತ್ರಗಳಿವೆ. ತೇಗಿನ ಮರದಿಂದ ಮಾಡಿರುವ ಈ ತೊಟ್ಟಿಲಿನ ಭಾಗಕ್ಕೆ ಗಂಟೆಗಳನ್ನು ಕಟ್ಟಿರುವುದು ಆಕರ್ಷಣೆ ಉಂಟು ಮಾಡುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!