Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗಾಗಿ ವಿಶೇಷ ರ್ಯಾಂಪ್

---Advertisement---

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿಚಿಪ್ಪಿನ ಸಮಸ್ಯೆ ಕಾಡುತ್ತಿದೆ. ಎಲ್ಲಿಯೇ ಹೋದರೂ ವೀಲ್ ಚೇರ್ ನಲ್ಲಿಯೇ ಓಡಾಡುತ್ತಿದ್ದಾರೆ. ಈಗ ಬಜೆಟ್ ಮಂಡನೆ ಕೂಡ ಶುರುವಾಗುತ್ತದೆ. ನಾಳೆಯಿಂದಾನೇ ಬಜೆಟ್ ಮುನ್ನ ಅಧಿವೇಶನ ನಡೆಯಲಿದೆ‌. ನಡೆಯಲು ಕಷ್ಟವಾಗುವ ಸಿಎಂ ಸಿದ್ದರಾಮಯ್ಯ ಅವರಿಗಾಗಿ ವಿಶೇಷ ರ್ಯಾಂಪ್ ನಿರ್ಮಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಕಲಾಪದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ರ್ಯಾಂಪ್ ಸೃಷ್ಟಿಸಲಾಗಿದೆ. ಪಶ್ಚಿಮ ಭಾಗ ಅಂದ್ರೆ ಕೆಂಗಲ್ ಗೇಟ್ ಬಳಿ ರ್ಯಾಂಪ್ ಸೃಷ್ಟಿಸಲಾಗಿದೆ. ಹೆಚ್ಚಾಗಿ ಸಿಎಂ ಸಿದ್ದರಾಮಯ್ಯ ಅವರು ಪಶ್ಚಿಮ ಭಾಗದಿಂದಾನೇ ವಿಧಾನಸೌಧದ ಒಳಗೆ ಬರುವುದು. ಹೀಗಾಗಿ ಅಲ್ಲಿ ವಿಶೇಷವಾಗಿ ರ್ಯಾಂಪ್ ಸೃಷ್ಟಿ ಮಾಡಲಾಗಿದೆ. ವಿಧಾನಸೌಧದ ಮೂರು ದ್ವಾರದಲ್ಲೂ ರ್ಯಾಂಪ್ ನಿರ್ಮಾಣ ಮಾಡಲಾಗಿದೆ.

ಮಾರ್ಚ್ 7ಕ್ಕೆ ಬಜೆಟ್ ಮಂಡಿಸಲಾಗುತ್ತದೆ. ಆದರೆ ಮಾರ್ಚ್ 3 ರಿಂದ ಬಜೆಟ್ ಮೇಲಿನ ಕಲಾಪ ಆರಂಭವಾಗಲಿದೆ. ಸಿಎಂ ಸಿದ್ದರಾಮಯ್ಯ ಅವರ ಪಾಲಿಗಿದು ದಾಖಲೆಯ ಬಜೆಟ್ ಆಗಲಿದೆ. ನಿಲ್ಲುವುದಕ್ಕೆ ಮಂಡಿ ಸಮಸ್ಯೆ ಇರುವ ಕಾರಣ ಕೂತೆ ಬಜೆಟ್ ಮಂಡನೆ ಮಾಡಬಹುದು. ಸಿಎಂ ಸಿದ್ದರಾಮಯ್ಯ ಸರ್ಕಾರ ಈಗಾಗಲೇ ಗ್ಯಾರಂಟಿಗಳನ್ನ ಜನಕ್ಕೆ ನೀಡಿದೆ. ಇದರ ನಡುವೆ ಬೇರೆ ಏನೆಲ್ಲಾ ಕೊಡಬಹುದು ಎಂಬ ನಿರೀಕ್ಷೆ ಸಹಜವಾಗಿಯೇ ಇರಲಿದೆ. ಇನ್ನು ಆಡಳಿತ ಸರ್ಕಾರವನ್ನು ಕಲಾಪದ ವೇಳೆಯೇ ಮಣಿಸಲು ವಿರೋಧ ಪಕ್ಷಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪ್ರಸ್ತುತ ರಾಜ್ಯದಲ್ಲಿ ಏನೆಲ್ಲಾ ಅನಹುತಗಳಾಗಿವೆ. ಅದರ ಬಗ್ಗೆಯೂ ಪ್ಲ್ಯಾನ್ ಮಾಡಿಕೊಂಡಿದೆ. ಹಾಗೇ ರಾಜ್ಯದಲ್ಲಿ ಏರಿಕೆಯಾದ ಬೆಲೆಗಳು, ಮೆಟ್ರೋ ದರ, ಹಾಲಿನ ದರದ ಬಗ್ಗೆ ಎಲ್ಲಾ ಕಲಾಪದಲ್ಲಿ ಪ್ರಶ್ನಿಸಿ, ಆಡಳಿತ ಸರ್ಕಾರವನ್ನು ಮಣಿಸಲು ಪ್ಲ್ಯಾನ್ ಮಾಡಿಕೊಂಡಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment