Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಂಗಭೂಮಿಯ ಚೈತನ್ಯಗಳ ಸಾಧನೆ ಮಕ್ಕಳಿಗೆ ತಲುಪಿಸಿದರೆ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯ : ಡಾ.ಮಲ್ಲಿಕಾರ್ಜುನಪ್ಪ

Facebook
Twitter
Telegram
WhatsApp

ಚಿತ್ರದುರ್ಗ : ರಂಗಭೂಮಿಯಲ್ಲಿ ವಿಶಿಷ್ಟ ಸೇವೆಸಲ್ಲಿಸಿರುವ ಅನೇಕ ಚೈತನ್ಯಗಳು ನಮ್ಮ ಕಣ್ಣಮುಂದಿವೆ ಅಂತಹ ಅದಮ್ಯ ಚೇತನಗಳ ಬಗ್ಗೆ ಮಕ್ಕಳಿಗೆ ತಿಳಿಸಿದರೆ ಸುಸ್ಥಿರ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಪ್ರಗತಿಪರ ಚಿಂತಕ ಡಾ.ಮಲ್ಲಿಕಾರ್ಜುನಪ್ಪ ಹೇಳಿದರು.

ನಗರದ ಹೇಮರೆಡ್ಡಿ ಮಲ್ಲಮ್ಮ ಸಭಾಂಗಣದಲ್ಲಿ ಶನಿವಾರ ರಂಗಸೌರಭ ಕಲಾ ಸಂಘ, ಜಿಲ್ಲಾ ಕಸಾಪ ಹಾಗು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ನೀನಾಸಂ ಕೆ.ವಿ.ಸುಬ್ಬಣ್ಣ ಹಾಗು ಡಾ.ರಾಮಚಂದ್ರನಾಯಕ ಸಂಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈದಿನ ಇಬ್ಬರು ಮಹನೀಯರ ಸಂಸ್ಮರಣೆ ಏರ್ಪಡಿಸಿರುವ ಸಂಘಟನೆಗಳಿಗೆ ಧನ್ಯವಾದ ಹೇಳುವೆ. ಕಾರಣ ರಂಗಭೂಮಿ, ಅಭಿನಯ, ಕಲೆ ಇವುಗಳು ಇತ್ತೀಚೆಗೆ ಕಣ್ಮರೆಯಾಗುತ್ತಿವೆ. ಮಕ್ಕಳಿಗೆ ಇವರ ಬಗ್ಗೆ ಪರಿಚಯಿಸಬೇಕಿದೆ. ಶಿಕ್ಷಣ ಕ್ಷೇತ್ರದಲ್ಲಿ ನಾಟಕಗಳು ತನ್ನದೇ ಆದ ಪ್ರಭಾವವನ್ನು ಬೀರುತ್ತವೆ. ಶಿಕ್ಷಕರು ಈ ನಾಟಕ, ಅಭಿನಯ, ಕಲೆ ರೂಢಿಸಿಕೊಂಡರೆ ಮಕ್ಕಳಿಗೆ ತಿಳಿಸುವ ವಿಷಯಗಳನ್ನು ಭಿನ್ನರೀತಿಯಲ್ಲಿ ಅರ್ಥೈಸಲು ಸಾಧ್ಯವಿದೆ. ಕೆ.ವಿ.ಸುಬ್ಬಣನವರ ಬಗ್ಗೆ ಉಪನ್ಯಾಸ ನೀಡಿದ ಡಾ.ಮೋಹನ್ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಶಿಕ್ಷಕರಾಗಿರುವುದು ಖುಷಿಯ ಸಂಗತಿ ಸಮಾಜವನ್ನು ರೂಪಿಸುವ ಶಿಕ್ಷಕರಿಗೆ ತರಬೇತಿ ನೀಡುವ ನೀವುಗಳು ರಂಗಭೂಮಿಯ ಬಗ್ಗೆ ಪ್ರಶಿಕ್ಷಣಾರ್ಥಿಗಳಿಗೆ ಮನವರಿಕೆ ಮಾಡಿಕೊಡಬೇಕು. ನೀನಾಸಂ ಸುಬ್ಬಣ್ಣ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದರೆ ನಮ್ಮ ಬಯಲು ಸೀಮೆಯ ಡಾ.ರಾಮಚಂದ್ರ ನಾಯಕರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿದರು ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಪತ್ರಕರ್ತ ಉಜ್ಜಿನಪ್ಪ ಮಾತನಾಡಿ, ನೀಲಕಂಠೇಶ್ವರ ನಾಟ್ಯ ಸೇವಾ ಸಂಘ ಎನ್ನುವುದು ದಶಕಗಳ ಹಿಂದೆ ಒಂದು ರಂಗ ಚಳುವಳಿಯಾಗಿ ನಾಡಿನಾದ್ಯಂತ ಮನೆಮಾತಾಯಿತು. ಅವರ ತಂಡದಲ್ಲಿ ಯು.ಆರ್.ಅನಂತಮೂರ್ತಿ, ಶಾಂತವೇರಿಗೋಪಾಲ ಗೌಡ, ಕೋಣಂದೂರು ಲಿಂಗಪ್ಪ ಅಂತಹ ಮೇಧಾವಿಗಳು ಸುಬ್ಬಣ್ಣನವರ ಕಾರ್ಯಗಳಿಗೆ ಬೆನ್ನೆಲುಬಾಗಿ ಪ್ರೋತ್ಸಾಹಿಸುತ್ತಿದ್ದರು. ಹೆಗ್ಗೋಡು ಎಂಬ ಚಿಕ್ಕಹಳ್ಳಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಲು ಅವರ ಅವಿರತ ಶ್ರಮವೇ ಕಾರಣ. ಏಷ್ಯಾದಲ್ಲಿಯೇ ಅತ್ಯುತ್ತಮ ಪ್ರಶಸ್ತಿ ಮ್ಯಾಗ್ಸೆಸೆ ಪ್ರಶಸ್ತಿ, ಕಾಳಿದಾಸ ಸಮ್ಮಾನ ಪ್ರಶಸ್ತಿ ಅವರಿಗೆ ಸಂದಿರುವುದು ಅವರ ಬದ್ಧತೆಗೆ ಧೀಮಂತ ದೃಷ್ಟಾಂತವಾಗಿದೆ ಎಂದರು.

ಡಾ.ಮೋಹನ್ ಕುಮಾರ್ ಕೆ.ವಿ.ಸುಬ್ಬಣ್ಣನವರ ಬದುಕು ಮತ್ತು ಸಾಧನೆಗಳ ಬಗ್ಗೆ ಸುದೀರ್ಘವಾಗಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಡಾ. ರಾಮಚಂದ್ರನಾಯಕರು ಜಿಲ್ಲೆಯಲ್ಲಿ ಯಾವ ರೀತಿ ಮನೆಮಾತಾಗಿದ್ದರು ಎಂಬುದನ್ನು ತಿಳಿಸಿದರು.

ಹಿರಿಯ ಕಲಾವಿದ ಜಂಬುನಾಥರವರು ಡಾ.ರಾಮಚಂದ್ರನಾಯಕ ಅವರೊಂದಿಗಿನ ಒಡನಾಟದ ಸಂದರ್ಭಗಳನ್ನು ತಿಳಿಸಿದರು.
ರಂಗಸೌರಭ ಕಲಾ ಸಂಘದ ಕೆ.ಪಿ.ಎಂ.ಗಣೇಶಯ್ಯ ಮತ್ತು ಪದಾಧಿಕಾರಿಗಳು ಜಿ.ಕ ಸಾ.ಪ ಸಂಘಟನಾ ಕಾರ್ಯದರ್ಶಿ ವಿ.ಧನಂಜಯ, ಗೌರವ ಕೋಶಾಧ್ಯಕ್ಷ ಚೌಳೂರು ಲೋಕೇಶ್, ಮುಖ್ಯಶಿಕ್ಷಕ ಸಿ.ರಂಗಾನಾಯ್ಕ್, ಕಲಾವಿದ ಎಂ.ಕೆ.ಹರೀಶ್, ಪೋಲೀಸ್ ಮನು, ಗಾಯಕ ಗಂಗಾಧರ, ಹಿಮಂತರಾಜ್, ಮೈಲಾರಿ ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಗಾಳಿ ಮಳೆಗೆ ಹಾರಿಹೋದ ಶಾಲೆಯ ಮೇಲ್ಛಾವಣಿ ಶೀಟುಗಳು, ಹ್ಯಾಂಗ್ಲರುಗಳು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,     ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 11 : ಶುಕ್ರವಾರ ರಾತ್ರಿ ಸುರಿದ ಮಳೆ ಗಾಳಿಗೆ ಮಲ್ಲಾಪುರದಲ್ಲಿರುವ ಬಾಪೂಜಿ ಹಿರಿಯ ಪ್ರಾಥಮಿಕ

ಬೆಂಗಳೂರಿನಲ್ಲಿ KAS ಆಫೀಸರ್ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಬೆಂಗಳೂರು: ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾ ಬಿ.ಗೌಡ ಎಂಬುವವರು ಸಾವನ್ನಪ್ಪಿದ್ದಾರೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಚೈತ್ರಾಗೆ ಇನ್ನು 35 ವರ್ಷ ವಯಸ್ಸಾಗಿತ್ತಷ್ಟೆ. ಸಂಜಯ್ ನಗರ ಪೊಲೀಸ್ ಠಾಣಾ

ಟೀಂ ಇಂಡಿಯಾ ಕೋಚ್ ಹುದ್ದೆಗೆ ಮೂವರ ಹೆಸರು ರೇಸ್ ನಲ್ಲಿ : ದ್ರಾವಿಡ್ ಗೆ ಸಿಗಲ್ವಾ ಮತ್ತೆ ಹುದ್ದೆ..?

ಐಪಿಎಲ್ ಮುಗಿದ ಕೂಡಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅದಕ್ಕೆ ಉಳಿದಿರುವುದು ಇನ್ನು ಕೇವಲ 20 ದಿನಗಳಷ್ಟೇ. ಆದರೆ ಈ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಬಗ್ಗೆ ಚರ್ಚೆ ಶುರುವಾಗಿದೆ. ಈಗ ಇರುವ ಟೀಂ ಇಂಡಿಯಾದ

error: Content is protected !!