Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆಯಲ್ಲಿ ನಾಳೆಯಿಂದ ಮೂರು ದಿನ ಆಧ್ಯಾತ್ಮಿಕ ಸಂಸ್ಕೃತಿ ಉತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 : ಮಹಾಶಿವರಾತ್ರಿ ಅಂಗವಾಗಿ ಮೂರು ದಿನಗಳ ಕಾಲ ಆಧ್ಯಾತ್ಮಿಕ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿದೆ. ಶಿವಲಿಂಗಗಳ ಪ್ರತಿಷ್ಠಾಪನೆ ಮತ್ತು ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿದೆ ಎಂದು ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯದ ವಿಮಲಕ್ಕೆ ಹೇಳಿದರು.

ನಗರದ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿದ್ದ ಶಿವರಾತ್ರಿ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ನಗರದ ಬಿಇಒ ಕಚೇರಿ ಆವರಣದಲ್ಲಿ ಮೂರು ದಿನಗಳ ಕಾಲ ಶಿವರಾತ್ರಿ ಪ್ರಯುಕ್ತ ಪೂಜಾ ಕಾರ್ಯ ನೆರವೇರಿಸಲಾಗುವುದು. ಕೆಲ ಹಬ್ಬಗಳು ಜಾತಿ, ಜನಾಂಗ, ಬುಡಕಟ್ಟು ಆಚರಣೆ ವಿಭಾಗವಾಗಿ ಕಾಣುತ್ತೇವೆ. ಆದರೆ, ಮಹಾಶಿವರಾತ್ರಿ ಮನುಕುಲವೇ ಆಚರಿಸುವ ಹಬ್ಬವಾಗಿದೆ.

ಶಿವರಾತ್ರಿ ಅಂಗವಾಗಿ ಫೆ.25 ರಂದು ರೈತ ಸಶಕ್ತೀಕರಣೋತ್ಸವ, ಫೆ.26 ರಂದು ಶಿವರಾತ್ರಿ ಮಹೋತ್ಸವ, ಆಧ್ಯಾತ್ಮಿಕ ಸಂಸ್ಕೃತಿ ಉತ್ಸವ, ಫೆ.27ರಂದು ಭಕ್ತರಿಗೆ ಅಭಿನಂದನಾ ಉತ್ಸವ ಆಚರಿಸುತ್ತೇವೆ. ಮೂರುದಿನಗಳ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಶಿವ ಪರಮಾತ್ಮ ಎಂದರೆ ಯಾರು, ತಪಸ್ವಿ ಶಂಕರನೆಂದರೆ ಯಾರು, ಶಿವಲೋಕ ಎಲ್ಲಿದೆ, ಗುಹ್ಯ ರಹಸ್ಯ ಹೀಗೆ ಆಧ್ಯಾತ್ಮಿಕ ವಿಚಾರ ಚಿಂತನೆಗಳ ಗೋಷ್ಟಿಗಳು ನಡೆಯುತ್ತವೆ. ಇದನ್ನು ಶಿವಭಕ್ತರು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಎಂ.ಎಸ್. ರಾಧಾ, ಓಂಕಾರಮ್ಮ, ಲಲಿತಮ್ಮ, ಚೂಡಾಮಣಿ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...