Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಯಿ ಕಾರಣಕ್ಕೆ ನಟ ದರ್ಶನ್ ವಿರುದ್ಧ ದೂರು ನೀಡಿದ ಮಹಿಳೆ..!

Facebook
Twitter
Telegram
WhatsApp

ಹೇಳಿ‌ ಕೇಳಿ ದರ್ಶನ್ ಪ್ರಾಣಿ ಪ್ರಿಯ. ಅವರ ಫಾರ್ಮ್ ಹೌಸ್ ನಲ್ಲಿ ಹಲವು ರೀತಿಯ ಪ್ರಾಣಿಗಳನ್ನು ಸಾಕಿದ್ದಾರೆ. ಅದರಲ್ಲಿ ನಾಯಿ ಕೂಡ ಒಂದು. ದರ್ಶನ್ ಗೆ ನಾಯಿಗಳೆಂದರು ಕೂಡ ತುಂಬಾ ಪ್ರೀತಿ. ಇದೀಗ ದರ್ಶನ್ ಸಾಕಿರುವ ನಾಯಿಗಳಿಂದ ಇದೀಗ ವಿವಾದ ಒಂದು ಉಂಟಾಗಿದೆ. ಇದೇ ಕಾರಣಕ್ಕೆ ಎಫ್ಐಆರ್ ದಾಖಲಾಗಿದೆ.

 

ಅಮಿತ ಜಿಂದಾಲ್ ಎಂಬ ಮಹಿಳೆ ದೂರು ನೀಡಿದ್ದಾರೆ. ದರ್ಶನ್ ಮನೆ ಮುಂದೆ ಅಮಿತ ಜಿಂದಾಲ್ ಕಾರು ನಿಲ್ಲಿಸಿದ್ದರು. ಕಾರು ತೆಗೆಯಲು ಹೋದಾಗ ದರ್ಶನ್ ಸಾಕು ನಾಯಿಗಳು ದಾಳಿ ಮಾಡಿ, ಕಚ್ಚಿವೆ. ಮಹಿಳೆಯ ಹೊಟ್ಟೆ ಮೇಲೆ ಗಾಯಗಳಾಗಿವೆ. ಈ ಕಾರಣಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ದೂರು ದಾಖಲಾಗಿದೆ.

 

ಅಮಿತ ಜಿಂದಾಲ್ ಆಸ್ಪತ್ರೆಯೊಂದರ ಕಾರ್ಯಕ್ರಮಕ್ಕೆ ಬಂದಿದ್ದರು. ಈ ವೇಳೆ ಕಾರನ್ನು ದರ್ಶನ್ ಮನೆ ಮುಂದೆ‌ ನಿಲ್ಲಿಸಿದ್ದರು. ಕಾರು ತೆಗೆಯಲು ಬಂದಾಗ, ಆ ನಾಯಿಗಳನ್ನು ಕಂಡು, ನಾಯಿ ನೋಡಿಕೊಳ್ಳುತ್ತಿದ್ದ ವ್ಯಕ್ತಿಗೆ ಹೇಳಿದ್ದಾರೆ. ಆ ನಾಯಿಗಳನ್ನು ಬೇರೆಡೆಗೆ ಎಳೆದುಕೊಂಡು ಹೋಗುವುದಕ್ಕೆ ಹೇಳಿದ್ದಾರೆ. ಆದರೆ ನಾಯಿಗಳನ್ನು ಎಳೆದುಕೊಂಡು ಹೋಗಲಿಲ್ಲ. ನಾಯಿಗಳು ಮಹಿಳೆಯ ಮೇಲೆ ಎಗರಿವೆ. ಈ ವೇಳೆ ಅಲ್ಲಿನ ಸಿಬ್ಬಂದಿಗಳು ನಾಯಿಗಳನ್ನು ಬಿಡಿಸುವ ಪ್ರಯತ್ನ ನಡೆದಿಲ್ಲ. ಹೀಗಾಗಿ ಮಹಿಳೆಯ ಹೊಟ್ಟೆಗೆ ನಾಯಿಗಳು ಕಚ್ಚಿವೆ.

 

ಈ ಸಂಬಂಧ ದರ್ಶನ್ ಮನೆಯ ಸಿಬ್ಬಂದಿ ಹಾಗೂ ದರ್ಶನ್ ಮೇಲೆ ದೂರು ದಾಖಲಾಗಿದೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಮನೆಯ ಮುಂದೆ ನಾಯಿ ಇದೆ ಎಚ್ಚರಿಕೆ ಹಾಗೂ ಪಾರ್ಕಿಂಗ್ ನಿಷೇಧದ ಪೋಸ್ಟರ್ ಹಾಕಲಾಗಿದೆ. ಆದರೆ ಈ ಪೋಸ್ಟರ್ ಗಳು ನಾನು ಕಾರು ನಿಲ್ಲಿಸುವಾಗ ಇರಲಿಲ್ಲ ಎಂದು ಆ ಮಹಿಳೆ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!