Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡೆಂಗ್ಯೂಗೆ ಶಿವಮೊಗ್ಗದ ಮಹಿಳೆ ಬಲಿ : ಏರುತ್ತಲೇ ಇದೆ ಮಹಾಮಾರಿ..!

---Advertisement---

ಶಿವಮೊಗ್ಗ: ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಸರಿಯಾದ ಸ್ವಚ್ಛತೆ ಕಾಪಾಡುವುದಕ್ಕೆ ಸರ್ಕಾರ ಕೂಡ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿದೆ‌. ಇದರ ಮಧ್ಯೆ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಲೆ ಇದೆ. ಇಂದು ಶಿವಮೊಗ್ಗದಲ್ಲಿ ಮಹಾಮಾರಿ ಡೆಂಗ್ಯೂಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. 42 ವರ್ಷದ ರಶ್ಮಿ ಆರ್.ನಾಯಕ್ ಎಂಬ ಮಹಿಳೆ ಬಲಿಯಾಗಿದ್ದಾರೆ.

ಮೃತ ರಶ್ಮಿ ಹೊಸಪೇಟೆ ತಾಲೂಕಿನ ರಿಪ್ಪನ್ ಪೇಟೆ ನಿವಾಸಿಯಾಗಿದ್ದಾರೆ. ಕಳೆದ 15-20 ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗೆಂದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆಗೆ ವೈದ್ಯರು ಕೂಡ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ರಶ್ಮಿ ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.

ಇನ್ನು ಈಗಾಗಲೇ ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಸಾಕಷ್ಟು ತಲೆದೋರಿವೆ. ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಆರೋಗ್ಯ ಇಲಾಖೆ ಸರಿಯಾಗಿ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅತ್ತ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅಲರ್ಟ್ ಆಗಿದ್ದಾರೆ. ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಖಡಕ್ ಸೂಚನೆ ನೀಡಿದ್ದಾರೆ. ಡೆಂಗ್ಯೂ ಪ್ರಕರಣಗಳು ಆದಷ್ಟು ಬೇಗ ನಿಯಂತ್ರಣಕ್ಕೆ ಬರಬೇಕು. ಅದಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಲು ಹಣ ಎಷ್ಟು ಬೇಕು ಅಂತ ಹೇಳಿದರೆ ಬೇಗ ಹಣ ಬಿಡುಗಡೆಯಾಗುತ್ತದೆ. ಆದರೆ ಎಲ್ಲಾ ಕಡೆ ಸೊಳ್ಳೆಗಳ ನಿಯಂತ್ರಣ ಆಗಬೇಕು, ಪರೀಕ್ಷೆಗಳು ಸರಿಯಾಗಿ ಆಗಬೇಕು, ಡೆಂಗ್ಯೂ ಪ್ರಕರಣಕ್ಕೆ ವಿಶೇಷ ಕೊಠಡಿಗಳನ್ನು ಸಿದ್ದಪಡಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment