ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಯುವತಿಯೊಬ್ಬಳು ತನ್ನ ಸೋಷಿಯಲ್ ಮೀಡಿಯಾ ಮೂಲಕ ಕನ್ನಡಿಗರನ್ನೇ ಕೆಣಕಿದ್ದಳು. ಉತ್ತರ ಭಾರತೀಯರು ಇಲ್ಲ ಅಂದ್ರೆ ಬೆಂಗಳೂರು ಖಾಲಿ ಖಾಲಿ. ಪಬ್ ಗಳು ನಡೆಯಲ್ಲ. ನಮ್ಮ ಬಗ್ಗೆ ಮಾತನಾಡುವಾಗ ಎಚ್ಚರದಿಂದ ಮಾತನಾಡಿ ಎಂದಿದ್ದರು. ಇದೀಗ ಕೆಟ್ಟ ಮೇಲೆ ಬುದ್ದಿ ಬಂತು ಎಂಬಂತೆ ಆಗಿದೆ ಆ ಯುವತಿಯ ಪರಿಸ್ಥಿತಿ. ಈಗ ಇದ್ದ ಕೆಲಸವನ್ನು ಕಳೆದುಕೊಂಡಿದ್ದಾರೆ.
ಕರ್ನಾಟಕದಲ್ಲೇ ಇದ್ದು ಕನ್ನಡಿಗರನ್ನೇ ಕೆಣಕಿ, ತಮಗೆ ಇಷ್ಟ ಬಂದಂತೆ ಇಲ್ಲಿಯೇ ಇರುವುದು ಕಷ್ಟ ಸಾಧ್ಯವೇ. ಕರ್ನಾಟಕ ಅದರಲ್ಲೂ ಬೆಂಗಳೂರು ಎಲ್ಲರಿಗೂ ಜಾಗ ಕೊಟ್ಟಿದ್ದು, ಅನ್ನ ಕೊಟ್ಟಿದೆ. ಅದಕ್ಕೆ ಗೌರವ ಕೊಡಲೇಬೇಕು ಅಲ್ವಾ. ಆದರೆ ಅಗೌರವ ತೋರಿಸಿಕೊಂಡು ನಮ್ಮಿಂದಾನೇ ನೀವೂ ಅನ್ನೋ ಅಹಂಕಾರ ಮೆರೆದರೆ ಕನ್ನಡಿಗರು ಹೇಗೆ ಕಿವಿ ಮಾತು ಹೇಳಬೇಕೋ ಆ ರೀತಿ ಹೇಳುತ್ತಾರೆ. ಈಗ ಆಗಿದ್ದು ಅದೇ. ಆ ಯುವತಿಯ ಮಾತುಗಳು ಕನ್ನಡಿಗರನ್ನು ಕೆರಳಿ ಕೆಂಡವಾಗುವಂತೆ ಮಾಡಿತ್ತು. ಸುಗಂಧ ಶರ್ಮಾ ಮಾತಿಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು, ಟೀಕೆಗಳು ಕೇಳಿ ಬಂದಿತ್ತು.
ಸುಗಂಧ ಶರ್ಮಾ ಆಡಿದ ಮಾತುಗಳಿಗೆ ಕೋರಮಂಗಲದ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಾಗುತ್ತಿದ್ದಂತೆ ಆಕೆ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ಆಕೆಯನ್ನು ಕೆಲಸದಿಂದ ವಜಾ ಮಾಡಿದೆ. ಇದರ ಪರಿಣಾಮ ಸುಗಂಧಾ ಶರ್ಮಾ ಗಂಟು ಮೂಟೆ ಕಟ್ಟಬೇಕಾದ ಪರಿಸ್ಥಿತಿ ಎದುರಾಗಿದೆ. ನಾವಿಲ್ಲದಿದ್ದರೆ ಬೆಂಗಳೂರು ಗ್ಲಾಮರ್ ಕಳೆದುಕೊಳ್ಳುತ್ತದೆ ಎಂದ ಯುವತಿಗೆ ಈಗ ಬಿಸಿ ಮುಟ್ಟಿದೆ. ಇನ್ನಾದರೂ ಬೇರೆ ಕಡೆಯಿಂದ ಬರುವ ಜನ ಸ್ಥಳೀಯವಾಗಿ ಉಳಿದುಕೊಳ್ಳುವ, ಅನ್ನ ತಿನ್ನುವ ಜಾಗಕ್ಕೆ ಬೆಲೆ ಕೊಡೋದನ್ನ ಕಲಿಯಬೇಕಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್