Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನ್ನಡಿಗರನ್ನು ಕೆಣಕಿದ್ದ ಕೆಲಸ‌ ಕಳೆದುಕೊಂಡ ಉತ್ತರ ಭಾರತದ ಯುವತಿ..!

---Advertisement---

 

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಯುವತಿಯೊಬ್ಬಳು ತನ್ನ ಸೋಷಿಯಲ್ ಮೀಡಿಯಾ ಮೂಲಕ ಕನ್ನಡಿಗರನ್ನೇ ಕೆಣಕಿದ್ದಳು. ಉತ್ತರ ಭಾರತೀಯರು ಇಲ್ಲ ಅಂದ್ರೆ ಬೆಂಗಳೂರು ಖಾಲಿ ಖಾಲಿ. ಪಬ್ ಗಳು ನಡೆಯಲ್ಲ. ನಮ್ಮ ಬಗ್ಗೆ ಮಾತನಾಡುವಾಗ ಎಚ್ಚರದಿಂದ ಮಾತನಾಡಿ ಎಂದಿದ್ದರು. ಇದೀಗ ಕೆಟ್ಟ ಮೇಲೆ ಬುದ್ದಿ ಬಂತು ಎಂಬಂತೆ ಆಗಿದೆ ಆ ಯುವತಿಯ ಪರಿಸ್ಥಿತಿ. ಈಗ ಇದ್ದ ಕೆಲಸವನ್ನು ಕಳೆದುಕೊಂಡಿದ್ದಾರೆ.

ಕರ್ನಾಟಕದಲ್ಲೇ ಇದ್ದು ಕನ್ನಡಿಗರನ್ನೇ ಕೆಣಕಿ, ತಮಗೆ ಇಷ್ಟ ಬಂದಂತೆ ಇಲ್ಲಿಯೇ ಇರುವುದು ಕಷ್ಟ ಸಾಧ್ಯವೇ. ಕರ್ನಾಟಕ ಅದರಲ್ಲೂ ಬೆಂಗಳೂರು ಎಲ್ಲರಿಗೂ ಜಾಗ ಕೊಟ್ಟಿದ್ದು, ಅನ್ನ ಕೊಟ್ಟಿದೆ. ಅದಕ್ಕೆ ಗೌರವ ಕೊಡಲೇಬೇಕು ಅಲ್ವಾ. ಆದರೆ ಅಗೌರವ ತೋರಿಸಿಕೊಂಡು ನಮ್ಮಿಂದಾನೇ ನೀವೂ ಅನ್ನೋ ಅಹಂಕಾರ ಮೆರೆದರೆ ಕನ್ನಡಿಗರು ಹೇಗೆ ಕಿವಿ ಮಾತು ಹೇಳಬೇಕೋ ಆ ರೀತಿ ಹೇಳುತ್ತಾರೆ. ಈಗ ಆಗಿದ್ದು ಅದೇ. ಆ ಯುವತಿಯ ಮಾತುಗಳು ಕನ್ನಡಿಗರನ್ನು ಕೆರಳಿ ಕೆಂಡವಾಗುವಂತೆ ಮಾಡಿತ್ತು. ಸುಗಂಧ ಶರ್ಮಾ ಮಾತಿಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು, ಟೀಕೆಗಳು ಕೇಳಿ ಬಂದಿತ್ತು.

ಸುಗಂಧ ಶರ್ಮಾ ಆಡಿದ ಮಾತುಗಳಿಗೆ ಕೋರಮಂಗಲದ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಾಗುತ್ತಿದ್ದಂತೆ ಆಕೆ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ಆಕೆಯನ್ನು ಕೆಲಸದಿಂದ ವಜಾ ಮಾಡಿದೆ. ಇದರ ಪರಿಣಾಮ ಸುಗಂಧಾ ಶರ್ಮಾ ಗಂಟು ಮೂಟೆ ಕಟ್ಟಬೇಕಾದ ಪರಿಸ್ಥಿತಿ ಎದುರಾಗಿದೆ. ನಾವಿಲ್ಲದಿದ್ದರೆ ಬೆಂಗಳೂರು ಗ್ಲಾಮರ್ ಕಳೆದುಕೊಳ್ಳುತ್ತದೆ ಎಂದ ಯುವತಿಗೆ ಈಗ ಬಿಸಿ ಮುಟ್ಟಿದೆ. ಇನ್ನಾದರೂ ಬೇರೆ ಕಡೆಯಿಂದ ಬರುವ ಜನ ಸ್ಥಳೀಯವಾಗಿ ಉಳಿದುಕೊಳ್ಳುವ, ಅನ್ನ ತಿನ್ನುವ ಜಾಗಕ್ಕೆ ಬೆಲೆ ಕೊಡೋದನ್ನ ಕಲಿಯಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment