ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ನವೆಂಬರ್ ತಿಂಗಳಿನಿಂದ ಕೆಲವೊಂದು ವಸ್ತುಗಳ ಮೇಲೆ ವ್ಯತ್ಯಾಸವಾಗಲಿದೆ. ಆಧಾರ್ ಕಾರ್ಡ್ ನಿಂದ ಹಿಡಿದು ಬ್ಯಾಂಕ್ ವರೆಗೆ ಒಂದಷ್ಟು ಬದಲಾವಣೆಗಳಾಗಿದೆ. ಹಾಗಾದ್ರೆ ನವೆಂಬರ್ ನಿಂದ ಏನೆಲ್ಲಾ ಬದಲಾವಣೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ಆಧಾರ್ ಕಾರ್ಡ್ ನಲ್ಲಿ ಒಂದಷ್ಟು ಬದಲಾವಣೆಯಾಗಲಿದೆ. ಯುಐಡಿಎಐ ಮಕ್ಕಳ ಆಧಾರ್ ಕಾರ್ಡ್ ಗಳ ಬಯೋಮೆಟ್ರಿಕ್ ಅಪ್ಡೇಟ್ 125 ರೂಪಾಯಿ ಶುಲ್ಕವನ್ನು ಮನ್ನಾ ಮಾಡಿದೆ. ಇದು ಒಂದು ವರ್ಷದವರೆಗೆ ಉಚಿತ ಇರಲಿದೆ. ವಯಸ್ಕರರಿಗೆ, ಹೆಸರು, ಜನ್ಮ ದಿನಾಂಕ, ವಿಳಾಸ ಅಥವಾ ಮೊಬೈಲ್ ಸಂಖ್ಯೆಯಂತಹ ವಿವರಗಳನ್ನು ಅಪ್ಡೇಟ್ ಮಾಡಲು 75 ರೂಪಾಯಿ, ಫಿಂಗರ್ಪ್ರಿಂಟ್ ಅಥವಾ ಐರಿಸ್ ಸ್ಕ್ಯಾನ್ಗಳಂತಹ ಬಯೋಮೆಟ್ರಿಕ್ ಅಪ್ಡೇಟ್ಗೆ 125 ರೂಪಾಯಿ ನಿಗದಿಪಡಿಸಲಾಗಿದೆ.
ಬ್ಯಾಂಕ್ ವಿಚಾರದಲ್ಲಿ ಇಂದಿನಿಂದ ಅಂದರೆ ನವೆಂಬರ್ 1 ರಿಂದ ಬ್ಯಾಂಕ್ ಗಳು ಗ್ರಾಹಕರಿಗೆ ಒಂದು ಖಾತೆ, ಲಾಕರ್ ಅಥವಾ ಸೇಫ್ ಕಸ್ಟಡಿಗೆ ನಾಲ್ಕು ಜನರನ್ನು ನಾಮ ನಿರ್ದೇಶನ ಮಾಡಲು ಅವಕಾಶ ನೀಡುತ್ತವೆ. ತುರ್ತು ಸಂದರ್ಭಗಳಲ್ಲಿ ಕುಟುಂಬಗಳಿಗೆ ಹಣವನ್ನು ಸುಲಭವಾಗೊ ಪಡೆಯಲು ಮತ್ತು ಮಾಲೀಕತ್ವದ ವಿವಾದಗಳನ್ನು ತಪ್ಪಿಸಲು ಈ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ. ಹಾಗೆ ಹೊಸ ಜಿಎಸ್ಟಿ ನಿಯಮಗಳು ಜಾರಿಯಾಗಲಿದ್ದು, ಸರ್ಕಾರವು ಕೆಲ ವಸ್ತುಗಳಿಗೆ ವಿಶೇಷ ದರದೊಂದಿಗೆ ಹೊಸ ಎರಡು ಸ್ಲ್ಯಾಬ್ ಜಿಎಸ್ಟಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಇದು ಇಂದಿನಿಂದ ಜಾರಿಗೆ ಬರುತ್ತಿದೆ. ಹಿಂದಿನ ಶೇಕಡ 5, 12, 18, ಮತ್ತು 28ರ ನಾಲ್ಕು ಸ್ಲ್ಯಾಬ್ ವ್ಯವಸ್ಥೆಯನ್ನು ಬದಲಾವಣೆ ಮಾಡಲಾಗಿದೆ. ಹೀಗಾಗಿ ನವೆಂಬರ ಮೊದಲ ದಿನದಿಂದ ಹಲವು ಬದಲಾವಣೆಗಳು ಆಗಲಿವೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್