Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

Facebook
Twitter
Telegram
WhatsApp

ಚಿತ್ರದುರ್ಗ. ಜೂನ್.21:  ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ ಶೇ.75ಕ್ಕಿಂತಲೂ ಹೆಚ್ಚು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಹಿರಿಯೂರು ತಾಲ್ಲೂಕು ವ್ಯಾಪ್ತಿಯಲ್ಲಿ ಪಹಣಿ ಆಧಾರ್ ಜೋಡಣೆ ಹಾಲಿ ಶೇ.48ರಷ್ಟು ಪ್ರಗತಿ ಸಾಧಿಸಲಾಗಿದ್ದು, ತಿಂಗಳಾಂತ್ಯದೊಳಗೆ ಶೇ.75ಕ್ಕಿಂತಲೂ ಹೆಚ್ಚಿನ ಪ್ರಗತಿ ಸಾಧಿಸುವಂತೆ ಸೂಚಿಸಿದ ಅವರು, ಈ ನಿಟ್ಟಿನಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಅಗತ್ಯ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.
ಸರ್ಕಾರಿ ಆಸ್ತಿ ಸಂಗ್ರಹಿಸಲು ಡಿಜಿಟಲ್ ಪೆನ್ಸಿಂಗ್ ಪೂರೈಸಲು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಭೂಮಿ ರ್ಯಾಂಕಿಂಗ್‍ನಲ್ಲಿ ಉತ್ತಮ ಪ್ರಗತಿ ಸಾಧಿಸಬೇಕು. ಹಕ್ಕು ಬದಲಾವಣೆ ಪ್ರಕರಣಗಳನ್ನು ಕಾಲಮಿತಿಯಲ್ಲಿ ಪೂರೈಸಬೇಕು ಎಂದು ಹೇಳಿದರು.

ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುವ ಎಲ್ಲಾ ಫಲಾನುಭವಿಗಳಿಗೆ ಎನ್‍ಪಿಸಿ ಮ್ಯಾಪಿಂಗ್ ಹಾಗೂ ಆಧಾರ್ ಜೋಡಣೆಯನ್ನು ಶೇ.100ರಷ್ಟು ಪ್ರಗತಿ ಸಾಧಿಸಬೇಕು. ಬಾಕಿ ಇರುವ ಪ್ರಕರಣಗಳನ್ನು ಆದ್ಯತೆ ಮೇರೆಗೆ ಕ್ರಮವಹಿಸಲು ಸೂಚಿಸಿದರು.

ಸಭೆಯಲ್ಲಿ ಗ್ರೇಡ್-2 ತಹಶೀಲ್ದಾರ್ ಕೃಷ್ಣಪ್ಪ, ಉಪ ತಹಶೀಲ್ದಾರ್‍ಗಳು, ಶಿರಸ್ತೆದಾರರು, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಇದ್ದರು. ಹಿರಿಯೂರು ನಗರಸಭೆ ಪ್ರಗತಿ ಪರಿಶೀಲನಾ ಸಭೆ: ಕುಡಿಯುವ ನೀರು ಕಲುಷಿತವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಿಯಮಿತವಾಗಿ ಕುಡಿಯುವ ನೀರನ್ನು ಪರೀಕ್ಷೆ ಮಾಡಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು.

ಸ್ವಚ್ಛತೆ, ನೀರು ಸರಬರಾಜು, ಬೀದಿದೀಪಗಳ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಂದ ದೂರುಗಳು ಬಾರದಂತೆ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ನಗರಸಭೆ ವ್ಯಾಪ್ತಿಯ 15ನೇ ಹಣಕಾಸು ಯೋಜನೆ, ಸ್ವಚ್ಛ ಭಾರತ್ ಮಿಷನ್ 1 ಮತ್ತು 2 ಸೇರಿದಂತೆ ವಿವಿಧ ಯೋಜನೆಗಳ ಕುರಿತು ಮಾಹಿತಿ ಪಡೆದು ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಮಧ್ಯಸ್ಥಿಕೆ ಜನರಿಂದ ದಂಪತಿಗಳಿಗೆ ದಾರಿ ತಪ್ಪಿಸಲಿದ್ದಾರೆ, ಈ ರಾಶಿಯವರಿಗೆ ಶತ್ರುಪೀಡೆ ಅಧಿಕ

ಈ ರಾಶಿಯವರಿಗೆ ಮಧ್ಯಸ್ಥಿಕೆ ಜನರಿಂದ ದಂಪತಿಗಳಿಗೆ ದಾರಿ ತಪ್ಪಿಸಲಿದ್ದಾರೆ, ಈ ರಾಶಿಯವರಿಗೆ ಶತ್ರುಪೀಡೆ ಅಧಿಕ, ಶುಕ್ರವಾರ ರಾಶಿ ಭವಿಷ್ಯ -ಜೂನ್-28,2024 ಸೂರ್ಯೋದಯ: 05:48, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ

ಬಹುನಿರೀಕ್ಷಿತ ಪ್ರಭಾಸ್ ನಟನೆಯ ‘ಕಲ್ಕಿ 2898AD’ ಸಿನಿಮಾ ಫುಲ್ ಮಾರ್ಕ್ಸ್ ಕೊಟ್ಟ ಪ್ರೇಕ್ಷಕ : ಹೇಗಿದೆ ಸಿನಿಮಾ..?

ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898AD ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆಯನ್ನು ಹುಟ್ಟು ಹಾಕಿತ್ತು. ಪ್ರಭಾಸ್ ನಟನೆಯ ಈ ಸಿನಿಮಾ ಬಗ್ಗೆ ಕುತೂಹಲವೂ ಹೆಚ್ಚಿತ್ತು. ಇಂದು ದೇಶದಾದ್ಯಂತ ಸಿನಿಮಾ ರಿಲೀಸ್ ಆಗಿದೆ‌. ಅಭಿಮಾನಿಗಳು ಕೂಡ ಅದ್ದೂರಿಯಾಗಿ

ಕಳೆದ ವರ್ಷವೇ ಪ್ರಾಯೋಗಿಕ ಸಂಚಾರವಾಗಿದ್ದರು ಬೆಳಗಾವಿಗ್ಯಾಕೆ ವಂದೇ ಭಾರತ್ ಬಿಟ್ಟಿಲ್ಲ..?

ಬೆಳಗಾವಿ: ಕಳೆದ ವರ್ಷ ಅಂದ್ರೆ 2023ರಲ್ಲಿಯೇ ಬೆಳಗಾವಿಯಲ್ಲಿ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿತ್ತು. ಆದರೆ ಆಮೇಲೆ ಅದರ ಸುಳಿವು ಇಲ್ಲ. ಇಲ್ಲಿವರೆಗೂ ಬೆಂಗಳೂರು-ಧಾರವಾಡ-ಹುಬ್ಬಳ್ಳಿ ಮಾರ್ಗದ ವಂದೇಭಾರತ್ ರೈಲು ಸಂಚಾರ ಆರಂಭವಾಗಿಲ್ಲ. ಬೆಳಗಾವಿಗೆ ವಂದೇ ಭಾರತ್ ರೈಲು

error: Content is protected !!