ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಹಿರಿಯೂರು, ಜೂನ್. 24 : ಹಣ ಪಡೆದು ವಸತಿ ಹಂಚಿಕೆ ಆರೋಪ ಎದುರಿಸುತ್ತಿರುವ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಕೆ ಅಭಿನಂದನ್ ಆಗ್ರಹಿಸಿದರು.
ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಕಳೆದ ಎರಡು ವರ್ಷಗಳಿಂದ ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದೇವೆ. ಆದರೆ ಅದನ್ನು ಸತ್ಯ ಗೊತ್ತಿದ್ದರೂ ಸಹ ಕಾಂಗ್ರೆಸ್ ಅಲ್ಲಗಳೆಯುತ್ತ ಬಂದರು. ಕ್ಷೇತ್ರಕ್ಕೆ ಮನೆ ಪಡೆಯಲು ಲಂಚ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಡಳಿತ ಪಕ್ಷದಲ್ಲಿರುವ ಕಾಂಗ್ರೆಸ್ ಶಾಸಕರೇ ನೇರವಾಗಿ ಸಚಿವರ ವಿರುದ್ಧ ಆರೋಪ ಮಾಡಿದ್ದಾರೆ. ವಿರೋಧ ಪಕ್ಷ ಬಿಜೆಪಿ ಆರೋಪಿಸಿಲ್ಲ. ತಮ್ಮ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ಬಿಆರ್. ಪಾಟೀಲ ಅವರು ಆಡಿಯೋದಲ್ಲಿ ಮನೆ ಹಂಚಿಕೆ ಸಚಿವರ ವಿರುದ್ಧ ಸಿಡಿದೆದ್ದಾರೆ. ಬಡವರ ಮನೆ ಹಂಚಿಕೆ ಹೆಸರಿನಲ್ಲಿ ಹಣ ಪಡೆದ ಆರೋಪ ಎದುರಿಸುತ್ತಿರುವ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಮತ್ತು ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಬಿಆರ್ ಪಾಟೀಲ್ ಹೇಳಿರುವಂತೆ ಕ್ಷೇತ್ರಕ್ಕೆ ವಸತಿ ಹಂಚಿಕೆ ಮಾಡುವಂತೆ ಎರಡ್ಮೂರು ಬಾರಿ ಪತ್ರದ ಮೂಲಕ ಮನವಿ ಮಾಡಿದ್ದರೂ, ನನ್ನ ಗಮನಕ್ಕೆ ಬಾರದಂತೆ ನನ್ನ ಮತಕ್ಷೇತ್ರಕ್ಕೆ ಹಣ ಪಡೆದು 900 ಮನೆ ಕೊಟ್ಟಿದ್ದಾರೆ. ಹಿರಿಯ ಶಾಸಕರ ಆರೋಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಬೇಕು ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್