Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಟೆನಾಡಿನಲ್ಲಿ ಶುಭಾರಂಭವಾದ ಅರಮನೆ ಸ್ವೀಟ್ಸ್‌ : ಚಿತ್ರದುರ್ಗದ ಮಳಿಗೆ ಉದ್ಘಾಟಿಸಿದ ಅಭಿಷೇಕ್ ಅಂಬರೀಶ್

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.22 : ಕೋಟೆನಾಡಿನಲ್ಲಿ ನೂತನವಾಗಿ ಆರಂಭವಾದ ಅರಮನೆ ಸ್ವೀಟ್ಸ್‌ ಮಳಿಗೆಯನ್ನು ನಟ ಅಭಿಷೇಕ್ ಅಂಬರೀಶ್ ಉದ್ಘಾಟಿಸಿದರು.

ನಗರದ ಅಂಬೇಡ್ಕರ್ ವೃತ್ತದ ಬಳಿ ಇರುವ ನೂತನ ಮಳಿಗೆಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಅರಮನೆ ಸ್ವೀಟ್ಸ್, ಚಿತ್ರದುರ್ಗ ನಗರದಲ್ಲಿ ತಮ್ಮ ಎರಡನೇ ಮಳಿಗೆಯನ್ನು ಹೊಂದಿದ್ದು,  ಸಮಕಾಲೀನ ಅಭಿರುಚಿಗೆ ತಕ್ಕಂತೆ ಅತ್ಯಂತ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಶುದ್ಧ, ರುಚಿಕರ ಮತ್ತು ಉತ್ತಮ ಗುಣಮಟ್ಟದ ಸಿಹಿ ಉತ್ಪನ್ನಗಳನ್ನು ಜನತೆಗೆ  ತಲುಪಿಸುತ್ತದೆ ಎಂಬ ಭರವಸೆಯಿದೆ. ಗ್ರಾಹಕರಿಗೆ ಪ್ರಾಮಾಣಿಕ ಸೇವೆ, ಉತ್ತಮ ಗುಣಮಟ್ಟದ ಸಿಹಿತಿಂಡಿಗಳು ಮತ್ತು ಕರ್ನಾಟಕ ಸೇರಿದಂತೆ ವಿವಿಧ ಪ್ರದೇಶಗಳ  ಸಿಹಿತಿಂಡಿಗಳು, ಸಾಂಪ್ರದಾಯಿಕ ಶೈಲಿಯಲ್ಲಿ ಅದ್ಭುತವಾದ ರುಚಿಯನ್ನು ನೀಡಲಿದೆ. ಈಗಾಗಲೇ ದಾವಣಗೆರೆಯಲ್ಲಿ ಮೊದಲ ಮಳಿಗೆ ಆರಂಭವಾಗಿದ್ದು, ಎರಡನೇ ಮಳಿಗೆಯನ್ನು ನಾನು ಉದ್ಘಾಟನೆ ಮಾಡಿರುವುದು ನನಗೆ ಅತೀವ ಸಂತಸವಾಗಿದೆ. ದಾವಣಗೆರೆ ಚಿತ್ರದುರ್ಗ ಅಷ್ಟೇ ಅಲ್ಲದೇ ನಾಡಿನಾದ್ಯಂತ ತನ್ನ ಮಳಿಗೆಗಳನ್ನು ವಿಸ್ತರಿಸಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ಎಸ್.ಆರ್.ಎಸ್. ಸಮೂಹ ಸಂಸ್ಥೆಯ ಬಿ.ಎ. ಲಿಂಗಾರೆಡ್ಡಿ, ಕೆ.ಸಿ. ನಾಗರಾಜ, ಜಿ.ಎಸ್.ಅನಿತ್ ಕುಮಾರ್, ಅಮೋಘ, ಬಾಲಕೃಷ್ಣ ಅರಮನೆ ಸ್ವೀಟ್ಸ್ ಮಾಲೀಕರಾದ ಲಿಖಿತಾ ಮತ್ತು ಶ್ರೇಯಾ ಅವರು ಹಾಜರಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!