ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, (ಜೂ.01) : ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಹೊಣೆಗಾರಿಕೆ ಇರುವ ಸರ್ಕಾರ ಕೂಡಲೇ ನೈತಿಕೆ ಹೊಣೆ ಹೊತ್ತು, ಸಾರ್ವಜನಿಕವಾಗಿ ಸಂಚರಿಸುವ ಸರ್ಕಾರಿ ಬಸ್ಸುಗಳ ಮೇಲೆ ಪ್ರಚಾರಪಡಿಸುತ್ತಿರುವ ಗುಟ್ಕಾ ಜಾಹೀರಾತನ್ನು ರದ್ದುಪಡಿಸಬೇಕು ಎಂದು ಕನ್ನಡ ರಕ್ಷಣಾ ಮತ್ತು ಸಾಂಸ್ಕøತಿಕ ವೇದಿಕೆ ಅಧ್ಯಕ್ಷ ಕೊರ್ಲಕುಂಟೆ ತಿಪ್ಪೇಸ್ವಾಮಿ ಗುರುವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಮನವಿ ಸಲ್ಲಿಸಿದ್ದಾರೆ.
ಗುಟ್ಕಾ ಮತ್ತು ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡಲು ಸರ್ಕಾರವೇ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ಇದೇ ಸರ್ಕಾರ ಆದಾಯ ತಂದುಕೊಳ್ಳಲು ಗುಟ್ಕಾ ಬಳಸಲು ಪ್ರೇರೇಪಿಸುವ ರೀತಿಯಲ್ಲಿ ಸರ್ಕಾರಿ ಬಸ್ಸುಗಳ ಮೇಲೆ ಜಾಹೀರಾತು ಪ್ರಕಟಿಸಲು ಸರಿಯಲ್ಲ. ಸಾರ್ವಜನಿಕವಾಗಿ ಸಂಚರಿಸುತ್ತಿರುವ ಬಸ್ಸುಗಳ ಮೇಲೆ ದೊಡ್ಡ ಪ್ರಮಾಣದಲ್ಲಿ ‘ಗುಟ್ಕಾ ತುಂಬಿದ ವಿಮಲ್ ಪಾಕೆಟ್ನೊಂದಿಗೆ ಬಾಯಲ್ಲಿ ಹೇಳಿ ಕೇಸರಿ’ ಎಂಬ ಜಾಹೀರಾತು ಅಪಾಯಕಾರಿಯಾಗಿದೆ.
ಪ್ರತಿ ದಿನ ಸಾವಿರಾರು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಸಂಚರಿಸುವ ಬಸ್ಸುಗಳಲ್ಲಿ ಆರೋಗ್ಯಕ್ಕೆ ಹಾನಿಕರವಾದ ಪ್ರಕಟಣೆ ಕೂಡಲೇ ತೆರವುಗೊಳಿಸಬೇಕು. ಇದರ ಬದಲಿಗೆ ನಾಡಿನ ನೆಲ, ಜಲ, ಭಾಷೆಗಾಗಿ ಜೀವನ ನಡೆಸಿದ ಹೆಸರಾಂತ ಸಾಹಿತಿಗಳ ರಚನೆಯಾದ ಕೃತಿಗಳ ಹೆಸರು, ಕಲಾವಿದರ ಬದುಕಿನ ಸಂಸ್ಕøತಿ ಮತ್ತು ಪ್ರಾದೇಶಿಕ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಪ್ರಕಟಣೆಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಕೂಡಲೇ ಸರ್ಕಾರಕ್ಕೆ ಪತ್ರ ಬರೆದು ಸರ್ಕಾರದ ನಿರ್ದೇಶನದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಚಟ್ಟೇಕಂಬ ಸಿ.ಜಿ. ತಿಪ್ಪೇಸ್ವಾಮಿ, ಮಂಜುನಾಥ, ರಂಗಸ್ವಾಮಿ ಮತ್ತಿತರರು ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್