Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಮುಖ್ಯಮಂತ್ರಿಗೆ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

---Advertisement---

ಬೆಂಗಳೂರು, ಜನವರಿ 07 :  ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು.

ಶ್ರಮಿಕ ವರ್ಗದವರಿಗೆ  ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ವರದಿ ನೀಡಲು  ಎರಡು  ತಿಂಗಳ ಕಾಲ ಅವಧಿ ವಿಸ್ತರಣೆ ಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು  ಪ್ರಸ್ತಾಪಿಸಿದರು.  ತಹಸೀಲ್ದಾರ್ ಅವರು ಈ ಬಗ್ಗೆ ವರದಿ ನೀಡಲು ಸೂಚಿಸಿದ್ದು, ವರದಿಯನ್ನು ಶೀಘ್ರವಾಗಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಸೂಚಿಸಿದರು.

ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ , ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಶ್ರೀಗಳು ಹಾಗೂ ಹಿಂದುಳಿದ ಜಾತಿಗಳ ಮಠಗಳ ಸ್ವಾಮೀಜಿಗಳು,  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ  ಕೆ.ಎ. ದಯಾನಂದ ಉಪ ಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...