Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಮುಖ್ಯಮಂತ್ರಿಗೆ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

Facebook
Twitter
Telegram
WhatsApp

ಬೆಂಗಳೂರು, ಜನವರಿ 07 :  ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು.

ಶ್ರಮಿಕ ವರ್ಗದವರಿಗೆ  ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ವರದಿ ನೀಡಲು  ಎರಡು  ತಿಂಗಳ ಕಾಲ ಅವಧಿ ವಿಸ್ತರಣೆ ಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು  ಪ್ರಸ್ತಾಪಿಸಿದರು.  ತಹಸೀಲ್ದಾರ್ ಅವರು ಈ ಬಗ್ಗೆ ವರದಿ ನೀಡಲು ಸೂಚಿಸಿದ್ದು, ವರದಿಯನ್ನು ಶೀಘ್ರವಾಗಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಸೂಚಿಸಿದರು.

ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ , ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಶ್ರೀಗಳು ಹಾಗೂ ಹಿಂದುಳಿದ ಜಾತಿಗಳ ಮಠಗಳ ಸ್ವಾಮೀಜಿಗಳು,  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ  ಕೆ.ಎ. ದಯಾನಂದ ಉಪ ಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!