Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪತ್ರಿಕಾ ವಿತರಕರು ಹಾಗು ಗಿಗ್ ಕಾರ್ಮಿಕರಿಗೆ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ಸೌಲಭ್ಯ ಯೋಜನೆ : ಸೇವಾ ಸಿಂಧು ಪೋರ್ಟಲ್‌ನಲ್ಲಿ ನೊಂದಣಿ

---Advertisement---

 

ಚಿತ್ರದುರ್ಗ. ಡಿ.22: ದಿನಪತ್ರಿಕೆಗಳನ್ನು ವಿತರಿಸುವ ಪತ್ರಿಕಾ ವಿತರಕರಿಗೆ ರಾಜ್ಯ ಸರ್ಕಾರ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ಸೌಲಭ್ಯ ಯೋಜನೆ ಜಾರಿ ಮಾಡಿದೆ.

ಕರ್ನಾಟಕದಲ್ಲಿ ನಿವಾಸಿಯಾಗಿರುವ 16 ರಿಂದ 59 ವರ್ಷದೊಳಿಗಿನ ಪತ್ರಿಕಾ ವಿತರಕರು ಇ-ಶ್ರಮ ಪೋರ್ಟ್ಲ್  www.eshram.gov.in     ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಆದಾಯ ತೆರಿಗೆ ಪಾವತಿಸುವವರು ಹಾಗೂ ಇ.ಎಸ್.ಐ ಫಲಾನುಭವಿಗಳಿಗೆ ಯೋಜನೆ ಅನ್ವಯಿಸುವುದಿಲ್ಲ. ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ.2 ಲಕ್ಷ. ಅಪಘಾತದಿಂದ ಸಂಪೂರ್ಣವಾಗಿ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ಗರಿಷ್ಠ ರೂ.2 ಲಕ್ಷ, ಅಪಘಾತ ಹಾಗೂ ಗಂಭೀರ ಅನಾರೋಗ್ಯಕ್ಕೆ ಆಸ್ಪತ್ರೆ ವೆಚ್ಚ ಮರುಪಾವತಿ ರೂ.1 ಲಕ್ಷದ ವರೆಗೆ ಪರಿಹಾರ ದೊರಕಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾರ್ಮಿಕ ಅಧಿಕಾರಿ, ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಬಹುದು. ಕಚೇರಿ ದೂರವಾಣಿ ಸಂಖ್ಯೆ 08194-231394 ಹಾಗೂ ಕಾರ್ಮಿಕ ಸಹಾಯವಾಣಿ 155214 ಕರೆ ಮಾಡಬಹುದು.

 

ಗಿಗ್ ಕಾರ್ಮಿಕರ ವಿಮಾ ಯೋಜನೆ : ಸೇವಾ ಸಿಂಧು ಪೋರ್ಟಲ್‌ನಲ್ಲಿ ನೊಂದಣಿ

ದೇಶದಲ್ಲೇ ಮೊದಲ ಬಾರಿಗೆ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಝಾನ್, ಪ್ಲಿಫ್‌ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಪೊ ಬಿಗ್ ಬಾಸ್ಕೆಟ್, ಡೊಮಿನೊಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿರುವ ಗಿಗ್ ಕಾರ್ಮಿಕರಿಗೆ ರಾಜ್ಯ ಸರ್ಕಾರ ವಿಮಾ ಯೋಜನೆ ಜಾರಿ ಮಾಡಿದೆ. ಪೂರ್ಣಕಾಲಿಕ ಹಾಗೂ ಅರೆಕಾಲಿಕ ಡೆಲಿವರಿ ನೌಕರರು ಯೋಜನೆಯ ಲಾಭ ಪಡೆಯಬಹುದಾಗಿದೆ. ಎಲ್ಲಾ ಅರ್ಹ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೊಂದಾಯಿಸಿಕೊಳ್ಳಬಹುದು.

ವಿಮಾ ಸೌಲಭ್ಯವು ಕರ್ತವ್ಯದಲ್ಲಿ ಇರುವಾಗ ಹಾಗೂ ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯ ಆಗಿಲಿದೆ. ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ.2 ಲಕ್ಷ ಹಾಗೂ ಜೀವಾ ಮಿಮಾ ರೂ.2 ಲಕ್ಷ ಸೇರಿ ಒಟ್ಟು 4 ಲಕ್ಷ ಪರಿಹಾರ ದೊರಕಲಿದೆ. ಅಪಘಾತದಿಂದ ಸಂಪೂರ್ಣವಾಗಿ ಶಾಶ್ವತ ದುರ್ಬಲತೆಗೆ ಹೊಂದಿದರೆ ರೂ.2 ಲಕ್ಷ, ಅಪಘಾತದ ಸಂದರ್ಭದ ಆಸ್ಪತ್ರೆ ವೆಚ್ಚ ಮರುಪಾವತಿ ರೂ.1 ಲಕ್ಷ ಹಾಗೂ ಜೀವ ವಿಮಾ ರೂ.2 ಲಕ್ಷ ಪರಿಹಾರ ದೊರಕಲಿದೆ.

ಕರ್ನಾಟಕದಲ್ಲಿ ಡೆಲವರಿ ಕಾರ್ಯನಿರ್ವಹಿಸುತ್ತಿರವವರಿಗೆ ಮಾತ್ರ ಈ ಯೋಜನೆ ಅನ್ವಯಿಸುತ್ತದೆ. 18 ರಿಂದ 60 ವರ್ಷದೊಳಿಗಿನ ಕಾರ್ಮಿಕರು ಆಧಾರ್ ಸಂಖ್ಯೆ, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ, ವೇತನ ಚೀಟಿ, ವೇತನ ಪಡೆದ ಬ್ಯಾಂಕ್ ಪಾಸ್‌ಬುಕ್ ಹಾಗೂ ಇ-ಶ್ರಮ್ ಕಾರ್ಡ್ ಈ ಎಲ್ಲ ದಾಖಲೆಗಳೊಂದಿಗೆ ನೊಂದಣಿ ಮಾಡಿಕೊಳ್ಳಬಹುದು.

ಆದಾಯ ತೆರಿಗೆ ಪಾವತಿಸುವವರು ಹಾಗೂ ಇ.ಎಸ್.ಐ ಫಲಾನುಭವಿಗಳಿಗೆ ಯೋಜನೆ ಅನ್ವಯಿಸುವುದಿಲ್ಲ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾರ್ಮಿಕ ಅಧಿಕಾರಿ, ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಬಹುದು. ಕಚೇರಿ ದೂರವಾಣಿ ಸಂಖ್ಯೆ 08194-231394 ಹಾಗೂ ಕಾರ್ಮಿಕ ಸಹಾಯವಾಣಿ 155214 ಕರೆ ಮಾಡಬಹುದು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment