ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ,
ಮೊ : 97398 75729,
ಸುದ್ದಿಒನ್, ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೊರ್ಲತ್ತು ಗ್ರಾಮದ ರೈತ ಈರಣ್ಣ ಜಮೀನಿನಲ್ಲಿ ಅಡಿಕೆ ಗಿಡಗಳಿಗೆ ಬೆಂಕಿ ಆಕಸ್ಮಿಕ ಬೆಂಕಿ ಸಂಭವಿಸಿದೆ ಸುಮಾರು 800ಕ್ಕೂ ಹೆಚ್ಚು ಗಿಡಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ಇದರಿಂದ ರೈತ ಈರಣ್ಣ ಕಂಗಾಲಾಗಿದ್ದು, ರೈತನ ಕುಟುಂಬದಲ್ಲಿ ಆತಂಕ ಮನೆ ಮಾಡಿದೆ. ಅಡಿಕೆ ಗಿಡ ಸುಟ್ಟಿದ್ದಲ್ಲದೆ ಗಿಡಗಳಿಗೆ
ನೀರಿನ ಡ್ರೀಪ್ ಪೈಪ್ ಕೂಡ ಸುಟ್ಟು ಕರಕಲಾಗಿದ್ದು ಇದರಿಂದ ರೈತನಿಗೆ ಲಕ್ಷಾಂತರ ನಷ್ಟ ಸಂಭವಿಸಿದೆ ಎನ್ನಲಾಗಿದೆ.
ಅಡಿಕೆ ಗಿಡಕ್ಕೆ ಆಕಸ್ಮಿಕ ಬೆಂಕಿ ; 800 ಕ್ಕೂ ಹೆಚ್ಚು ಸುಟ್ಟು ಕರಕಲಾದ ಗಿಡಗಳು pic.twitter.com/JHavUqGyvW
— suddione-kannada News (@suddione) January 29, 2024
ರೈತ ಈರಣ್ಣ ತನ್ನ ಜಮೀನಿನಲ್ಲಿ 10 ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನ ಕೊರಸಿದ್ದರು. ಆದರೆ ಕೊಳವೆ ಬಾವಿಯಲ್ಲಿ ನೀರು ಅಷ್ಟಕಷ್ಟೆ ಬರುತಿತ್ತು. ಆದರೂ ಸಹ ಪಕ್ಕದ ಜಮೀನಿನಲ್ಲಿ ನೀರನ್ನು ಹಾಯಿಸಿಕೊಂಡು ಅಡಿಕೆ ಸಸಿಗಳನ್ನು ನೆಟ್ಟಿದ್ದರು. ಇದೀಗ ಅಡಿಕೆ ಗಿಡಗಳಿಗೆ ಬೆಂಕಿ ಬಿದ್ದಿದೆ.
ಘಟನೆ ಬಗ್ಗೆ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ ಪ್ರತಿಕ್ರಿಯಿಸಿ ಬೆಳಗೆರೆ ಕಾವಲಿನ ಸರ್ವೆ ನಂಬರ 283ರ ಜಮೀನಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಗಾಳಿ ಹೆಚ್ಚದಾ ಹಿನ್ನೆಲೆಯಲ್ಲಿ ಬೆಂಕಿ ಜಮೀನಿನ ಗಿಡಗಳಿಗೆ ಆವರಿಸಿಕೊಂಡು ಗಿಡಗಳಿಗೆ ತಾಗಿ ಸುಟ್ಟು ಹೋಗಿದೆ ಎಂದರು. ಇನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ರೈತನ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ ಯಾವ ಕ್ರಮ ಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್