Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಯತ್ನಾಳ್ ಮಾತಿಗೆ ಲಿಂಗಾಯತ ಬಣ ಗರಂ: ಕ್ಷಮೆ ಕೇಳುವಂತೆ ಒತ್ತಡ..!

---Advertisement---

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತಿನ ಬರದಲ್ಲಿ ಬಸವಣ್ಣನವರ ಬಗ್ಗೆ ಮಾತನಾಡಿದ್ದರು. ಯತ್ನಾಳ್ ಅವರ ಮಾತು ವೈರಲ್ ಆಗುತ್ತಿದ್ದಂತೆ ಲಿಂಗಾಯತ ಸಮುದಾಯದವರು ರೊಚ್ಚಿಗೆದ್ದಿದ್ದಾರೆ. ಯತ್ನಾಳ್ ವಿರುದ್ಧ ಗರಂ ಆಗಿದ್ದಾರೆ. ಯತ್ನಾಳ್ ಅವರು ಕ್ಷಮೆ ಕೇಳುವಂತೆ ಒತ್ತಡ ಹಾಕಿದ್ದಾರೆ.

ಬಿವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದಾಗಿನಿಂದ ಬಸನಗೌಡ ಪಾಟೀಲ್ ಯತ್ನಾಳ್ ಬಣ ಟಾರ್ಗೆಟ್ ಮಾಡಿತ್ತು. ಯಡಿಯೂರಪ್ಪ ಹಾಗೂ ಸನ್ಸ್ ವಿರುದ್ಧ ತಿರುಗಿ ಬಿದ್ದಿದ್ದರು. ಉಪಚುನಾವಣೆಯಲ್ಲಿ ಬಿಜೆಪಿ ಸೋತ ಬಳಿಕ ಯತ್ನಾಳ್ ಬಣ ಹಾಗೂ ವಿಜಯೇಂದ್ರ ಬಣದ ನಡುವೆ ಜೋರು ಮಾತಿನ ಯುದ್ಧವೇ ನಡೆಯುತ್ತಿತ್ತು. ಮಾತಿನ ಬರದಲ್ಲಿ ಬಸವಣ್ಣನವರ ಬಗ್ಗೆ ಮಾತನಾಡಿದ್ದಾರೆ. ಇದು ಲಿಂಗಾಯತ ಸಮುದಾಯದವರನ್ನ ಕೆರಳಿಸಿದೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಖಂಡಿಸಿದೆ. ಈ ರೀತಿಯ ಕೀಳುಮಟ್ಟದ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಬೇಕೆಂದು ಯತ್ನಾಳ್ ಗೆ ಎಚ್ಚರಿಕೆಯನ್ನು ಕೊಟ್ಟಿದೆ.

ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರು ಸಹ ಗುಡುಗಿದ್ದಾರೆ. ಅವರು ನಮ್ಮ ಸಮುದಾಯದ ಬಾಂಧವರು ಎಂಬ ಕಾರಣಕ್ಕೆ ಅವರ ಹುಚ್ಚಾಟಗಳನ್ನೆಲ್ಲಾ ಇಲ್ಲಿಯವರೆಗೆ ಸಹಿಸಿಕೊಂಡಿದ್ದೆವು. ಅವರೇ ಹುಚ್ಚಾಟ ನಿಲ್ಲಿಸದೆ ಇದ್ದಲ್ಲಿ ಸಮಾಜವೇ ಇದಕ್ಕೆ ಕಡಿವಾಣ ಹಾಕಲಿದೆ. ಅವರ ಹೇಳಿಕೆಗಳು, ಅವರು ನಡೆದುಕೊಳ್ಳುವ ರೀತಿ ನೋಡಿದರೆ ಅವರು ವೀರಶೈವ ಲಿಂಗಾಯತರು ಹೌದೇ ಎನ್ನುವ ಅನುಮಾನ ಬರುತ್ತದೆ. ವೀರಶೈವ ಲಿಂಗಾಯತರಿಗೆ ಇರಬೇಕಾದ ಆಚಾರ, ಸಂಸ್ಕಾರ ಅವರಲ್ಲಿ ಕಾಣಿಸದೆ ಇರುವುದು ದುರದೃಷ್ಟಕರ. ಅಗ್ಗದ ಪ್ರಚಾರಕ್ಕಾಗಿ, ರಾಜಕೀಯದ ತೆವಲಿಗಾಗಿ ಈ ರೀತಿಯ ಕೀಳುಮಟ್ಟದ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದೇ ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment