Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯ ಸರ್ಕಾರದ ಮೇಲೆ SC/ST ಅನುದಾನ ಬಳಕೆ ಆರೋಪ : ಮುತ್ತಿಗೆಗೆ ಬಿಜೆಪಿ ಸಿದ್ಧತೆ..!

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಾವೂ ಭರವಸೆ ನೀಡಿದ್ದ ಗ್ಯಾರಂಟಿಗಳನ್ನೆಲ್ಲಾ ಈಡೇರಿಸುತ್ತಿದೆ. ಆದರೆ ಅದಕ್ಕೆ ಕೋಟ್ಯಾಂತರ ರೂಪಾಯಿ ಹಣವಂತು ಖರ್ಚು ಆಗಿದೆ. ಈ ಹಣವನ್ನೆಲ್ಲಾ SC/ST ಸಮುದಾಯಕ್ಕೆಂದು ನೀಡಬೇಕಿದ್ದ ಅನುದಾನದಿಂದ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿಯ ಮಾಜಿ ಸಚಿವ ಗೋವಿಂದ ಕಾರಜೋಳ ಆರೋಪಿಸಿದ್ದಾರೆ‌.

SC, ST ಸಮುದಾಯಕ್ಕೆ ಮೀಸಲಾದ ಅನುದಾನದಲ್ಲಿ ಸುಮಾರು 11,144 ಕೋಟಿ ಹಣವನ್ನು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಆರೋಪಿಸಿದ ಬೆನ್ನಲ್ಲೇ ಮೂರು ಹಂತದಲ್ಲಿ ಹೋರಾಟ ಮಾಡಲು ಬಿಜೆಪಿ ನಾಯಕರು ಸಜ್ಜಾಗಿದ್ದಾರೆ. SC/ST ಅನುದಾನ ಬಳಕೆ ಮಾಡದಿದ್ದರೆ ಮೂರು ಹಂತದಲ್ಲಿ ಹೋರಾಟ ಮಾಡಿ, ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸೆಪ್ಟೆಂಬರ್ 25ರಿಂದ ಅಕ್ಟೋಬರ್ 10ರ ತನಕ ಮೊದಲ ಹಂತದ ಜನಾಂದೋಲನ, ಅಕ್ಟೋಬರ್ 11 ರಿಂದ 25ರ ತನಕ ಎರಡನೇ ಹಂತದಲ್ಲಿ ಜಿಲ್ಲೆಗಳಲ್ಲಿ ಸಚಿವರು, ಶಾಸಕರಿಗೆ ಮುತ್ತಿಗೆ, ನವೆಂಬರ್ 2ನೇ ವಾರದಲ್ಲಿ ಮೂರನೇ ಹಂತದಲ್ಲಿ ಹರಿಹರದ ಬಿ ಕೃಷ್ಣಪ್ಪ ಅವರ ಸಮಾಧಿಯಿಂದ ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತುಗೆ ಹಾಕಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮದಕರಿಪುರದಲ್ಲಿ ಕೊಲ್ಲಾಪುರದಮ್ಮ ಜಾತ್ರೆ | ಕೋಣ ಗುದ್ದಿ ಓರ್ವ ಮೃತ

  ಸುದ್ದಿಒನ್, ಚಿತ್ರದುರ್ಗ, ಮೇ. 01 : ಜಾತ್ರೆಯಲ್ಲಿ ದೇವಿಗೆ ಕೋಣ ಬಲಿ ಕೊಡುವ ವೇಳೆ ಕೊಣ ಗುದ್ದಿ ಕೊಲ್ಲಪ್ಪ (53 ವರ್ಷ) ಎಂಬಾತ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಮದಕರಿ ಪುರ ಗ್ರಾಮದಲ್ಲಿ ಇಂದು

ರಾಹುಲ್ ಚೌದ್ರಿ ನಿಧನ

  ಹಿರಿಯೂರು, ಸುದ್ದಿಒನ್, ಮೇ. 01 : ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ರಾಹುಲ್ ಚೌದ್ರಿ (34) ಅವರು ಅನಾರೋಗ್ಯದಿಂದ ಇಂದು(ಬುಧವಾರ) ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು

ಹೆಚ್ಚು ನೀರು ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ : ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ವೈದ್ಯರು ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲು ಹೇಳುತ್ತಾರೆ. ಹೆಚ್ಚು ನೀರು ಇರುವ ಹಣ್ಣುಗಳು ಮತ್ತು ಆಹಾರಗಳನ್ನು

error: Content is protected !!